ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪರಿಶೀಲಿಸಿದ ನಿತಿನ್‌ ಗಡ್ಕರಿ

ಬೆಂಗಳೂರು, ಜನವರಿ 5: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಜೊತೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ. ವೈಮಾನಿಕ ತಪಾಸಣೆಯ ನಂತರ ಸಚಿವರ ಹೆಲಿಕಾಪ್ಟರ್ ರಾಮನಗರ ಜಿಲ್ಲೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಳಿಯಿತು.

ಕಳೆದ ವರ್ಷ ಆಗಸ್ಟ್‌ನಲ್ಲಿ ಮಳೆಯ ನಂತರ ರಾಮನಗರದ ರಸ್ತೆಯು ಜಲಾವೃತಗೊಂಡ ನಂತರ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ವಿರುದ್ಧ ಭಾರೀ ಟೀಕೆ ಕೇಳಿಬಂದಿತ್ತು. ದಶಪಥ ಎಕ್ಸ್‌ಪ್ರೆಸ್‌ವೇಯ ಕೆಲವು ವಿಭಾಗಗಳಲ್ಲಿ ಗುಣಮಟ್ಟವಿಲ್ಲದ ಕಾಮಗಾರಿಯ ಬಗ್ಗೆ ಹಲವಾರು ದೂರುಗಳು ಕೇಳಿ ಬಂದಿದ್ದವು. ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯನ್ನು 8,453 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಮೂರರಿಂದ ಸುಮಾರು ಒಂದೂವರೆ ಗಂಟೆಗಳವರೆಗೆ ಕಡಿಮೆ ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಮಾಹಿತಿ ನೀಡಿದ್ದಾರೆ. ನರೇಂದ್ರ ಮೋದಿ ಅಥವಾ ದ್ರೌಪದಿ ಮುರ್ಮು ಅವರಿಂದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯು ಅವರ ವೇಳಾಪಟ್ಟಿಯನ್ನು ಅವಲಂಬಿಸಿರುತ್ತದೆ. ಬಳಿಕ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ದಿನಾಂಕವನ್ನು ನಿಗದಿಪಡಿಸುತ್ತದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ವಿನ್ಯಾಸಗೊಳಿಸಿದ ಪ್ರಕಾರ ಪ್ರಯಾಣದ ಸಮಯವನ್ನು 1 ಗಂಟೆ 10 ನಿಮಿಷಗಳಿಗೆ ಕಡಿಮೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ನಗರದ ದಟ್ಟಣೆ ಕಡಿತ ಮಾಡಬೇಕಿದೆ

ನಗರದ ದಟ್ಟಣೆ ಕಡಿತ ಮಾಡಬೇಕಿದೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಉಪನಗರಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಬೆಂಗಳೂರು ನಗರವು ಜನದಟ್ಟಣೆಯಿಂದ ಕೂಡಿದೆ ಎಂದು ಗಡ್ಕರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದರು. ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡುವುದರಿಂದ ನಗರದಲ್ಲಿ ಟ್ರಾಫಿಕ್ ದಟ್ಟಣೆಯೂ ಕಡಿಮೆಯಾಗುತ್ತದೆ ಎಂದು ಅವರು ಭೇಟಿ ವೇಳೆ ತಿಳಿಸಿದ್ದರು.

ಬಸವರಾಜ ಬೊಮ್ಮಾಯಿಯೊಂದಿಗೆ ಸಮಾಲೋಚನೆ

ಬಸವರಾಜ ಬೊಮ್ಮಾಯಿಯೊಂದಿಗೆ ಸಮಾಲೋಚನೆ

ಬೆಂಗಳೂರಿನಲ್ಲಿ ಸುಮಾರು 200 ಜನರನ್ನು ಸಾಗಿಸುವ ಸಾಮರ್ಥ್ಯವಿರುವ ಸ್ಕೈಬಸ್ ಅನ್ನು ಪರಿಚಯಿಸಲು ತಮ್ಮ ಸಚಿವಾಲಯ ಕೆಲಸ ಮಾಡುತ್ತಿದೆ ಮತ್ತು ಸ್ಕೈಬಸ್ ಸುಲಭದ ಯೋಜನೆಯಲ್ಲ. ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಂಪರ್ಕವನ್ನು ಹೊಂದಿದ್ದೇವೆ. ಆದಷ್ಟು ಬೇಗ ಮಾಡುತ್ತೇವೆ ಎಂದು ಸಚಿವರು ಹೇಳಿದರು.

ಫಿಲಿಪೈನ್ಸ್ ಡಬಲ್ ಡೆಕ್ಕರ್ ಸ್ಕೈಬಸ್ ಸೂಕ್ತ

ಫಿಲಿಪೈನ್ಸ್ ಡಬಲ್ ಡೆಕ್ಕರ್ ಸ್ಕೈಬಸ್ ಸೂಕ್ತ

ಸ್ಕೈಬಸ್‌ನ ಪರಿಚಯದ ಕುರಿತು ಕಾರ್ಯಸಾಧ್ಯತೆಯ ಅಧ್ಯಯನವನ್ನು ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, "ನಾವು ಸೂಕ್ತವಾದ ತಂತ್ರಜ್ಞಾನವನ್ನು ಆಯ್ಕೆ ಮಾಡಬೇಕಾಗಿದೆ. ಏಕೆಂದರೆ ನಾವು ದೇಶದಲ್ಲಿ ಅಂತಹ ತಂತ್ರಜ್ಞಾನವನ್ನು ಹೊಂದಬೇಕಿದೆ. ಫಿಲಿಪೈನ್ಸ್ ಡಬಲ್ ಡೆಕ್ಕರ್ ಸ್ಕೈಬಸ್ ಅನ್ನು ಹೊಂದಿದೆ. ಇದು ದೇಶಕ್ಕೆ ಸೂಕ್ತವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

ಈ ವರ್ಷ ಮಳೆಯು ದೊಡ್ಡ ಸಮಸ್ಯೆ

ಈ ವರ್ಷ ಮಳೆಯು ದೊಡ್ಡ ಸಮಸ್ಯೆ

ಬೆಂಗಳೂರಿಗೆ ಸ್ಕೈಬಸ್ ದೇಶದಲ್ಲಿ ಇಂತಹ ಯೋಜನೆಯನ್ನು ಯೋಜಿಸಿರುವುದು ಇದೇ ಮೊದಲು. ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಜಲಾವೃತಗೊಂಡಿರುವ ಬಗ್ಗೆ ನಿತಿನ್ ಗಡ್ಕರಿ ಅವರು, "ದುರದೃಷ್ಟವಶಾತ್, ಈ ವರ್ಷ ಮಳೆಯು ದೊಡ್ಡ ಸಮಸ್ಯೆಯಾಗಿದೆ. ಕೆಲವೊಮ್ಮೆ, ಗ್ರೇಡಿಯಂಟ್ ಪರಿಪೂರ್ಣವಾಗಿಲ್ಲ ಮತ್ತು ಗ್ರೇಡಿಯಂಟ್ ಅನ್ನು ನಿರ್ವಹಿಸಬೇಕಾಗುತ್ತದೆ. ನಾವು ಅದನ್ನು ಸರಿಪಡಿಸುತ್ತೇವೆ. ಉತ್ತಮ ಗುಣಮಟ್ಟದ ಕಾಮಗಾರಿಗಳೊಂದಿಗೆ ಪ್ರೀಕಾಸ್ಟ್ ತಂತ್ರಜ್ಞಾನದೊಂದಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುವಂತೆ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+