ಇಂದಿನಿಂದ 'ನಿವಾರ್' ಆರ್ಭಟ: ಬೆಂಗಳೂರಲ್ಲೂ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ನವೆಂಬರ್ 25: ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಲ್ಲಿ ನಡುಕ ಹುಟ್ಟಿಸಿರುವ ನಿವಾರ್ ಚಂಡಮಾರುತ ಇಂದು (ಬುಧವಾರ) ಮಧ್ಯಾಹ್ನ ಅಪ್ಪಳಿಸಿದೆ. ಇದರ ಪರಿಣಾಮ ನೆರೆಯ ರಾಜ್ಯಗಳ ಮೇಲೆಯೂ ಆಗಲಿದ್ದು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಮಳೆ ಸುರಿಯಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದ ಸ್ಥಿತಿ ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಭಾರಿ ಮಳೆ ಸುರಿಸುವ ಸಾಧ್ಯತೆ ಇದೆ. ಗಂಟೆಗೆ ಸುಮಾರು 120 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರಿ ಅನಾಹುತ ಉಂಟುಮಾಡುವ ಭಯ ಮೂಡಿಸಿದೆ.
ಬೆಂಗಳೂರಿನಲ್ಲಿ ಈಗಾಗಲೇ ಚಂಡಮಾರುತದ ಪ್ರಭಾವ ಕಂಡುಬಂದಿದ್ದು, ಮೋಡ ಹಾಗೂ ಗಾಳಿ ತೀವ್ರವಾಗಿದೆ. ಹಾಗೆಯೇ ಮಧ್ಯಾಹ್ನದ ಬಳಿಕ ವಿಪರೀತ ಮಳೆ ಸುರಿಯುವ ಸಂಭವ ಇದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗುವ ಆತಂಕವಿದೆ. ಕಳೆದ ಕೆಲವು ವಾರಗಳ ಹಿಂದೆ ಸುರಿದಿದ್ದ ಭಾರಿ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತಗೊಂಡಿದ್ದವು. ಅದರಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಆಘಾತ ಎದುರಾಗಬಹುದು.
ಸಂಭಾವ್ಯ ಹಾನಿ ತಪ್ಪಿಸಲು ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ತಗ್ಗುಪ್ರದೇಶಗಳಲ್ಲಿ ಜನರ ರಕ್ಷಣೆಗೆ ಮತ್ತು ಪರಿಹಾರ ಕಾರ್ಯಾಚರಣೆಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಮುಂದೆ ಓದಿ.

ರಾಜ್ಯದಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಈ ಭಾಗಗಳಲ್ಲಿ ಎರಡೂ ದಿನ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

22 ಎನ್ಡಿಆರ್ಎಫ್ ತಂಡ
ಇನ್ನು ತಮಿಳುನಾಡು, ಪುದುಚೆರಿ ಮತ್ತು ಆಂಧ್ರಪ್ರದೇಶದ ರಾಯಲಸೀಮೆ ಭಾಗಗಳಲ್ಲಿ ಎನ್ಡಿಆರ್ಎಫ್ನ 22 ತುಕಡಿ ಸೇರಿದಂತೆ 1,200 ಮಂದಿ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅದರಲ್ಲಿ 800 ಮಂದಿಯ ತಂಡಗಳು ಸನ್ನದ್ಧವಾಗಿವೆ.

ಎನ್ಡಿಆರ್ಎಫ್ ತಂಡಗಳು ಸಜ್ಜು
ತಮಿಳುನಾಡಿನಲ್ಲಿ 12 ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಎರಡು ತಂಡಗಳು ಪುದುಚೆರಿ, ಒಂದು ತಂಡ ಕಾರೈಕಲ್ನಲ್ಲಿ ಸಜ್ಜುಗೊಂಡಿವೆ. ಇನ್ನು ಮೂರು ತಂಡಗಳು ನೆಲ್ಲೂರು, ವಿಶಾಖಪಟ್ಟಣ ಮತ್ತು ಒಂದು ತಂಡ ಚಿತ್ತೂರಿನಲ್ಲಿ ವಿಪತ್ತು ಎದುರಿಸಲು ಸನ್ನದ್ಧವಾಗಿವೆ. 22 ತಂಡಗಳು ಅಪಾಯಕಾರಿ ಎಂದು ಗುರುತಿಸಲಾಗಿರುವ ಸ್ಥಳಗಳಲ್ಲಿ ಬೀಡುಬಿಟ್ಟಿದ್ದರೆ, ಇನ್ನು ಎಂಟು ತಂಡಗಳು ಹೆಚ್ಚುವರಿ ನೆರವು ನೀಡಲು ಸಿದ್ಧವಾಗಿವೆ.

ಮುನ್ನಗ್ಗುತ್ತಿದೆ ಚಂಡಮಾರುತ
ತಮಿಳುನಾಡು ಮತ್ತು ಪುದುಚೆರಿಯ ಅನೇಕ ಕಡೆ ಈಗಾಗಲೇ ಮಳೆ ಆರ್ಭಟ ಶುರುವಾಗಿದೆ. ಪುದುಚೆರಿಯಿಂದ ಪೂರ್ವ ಆಗ್ನೇಯ ದಿಕ್ಕಿನ 410 ಕಿಮೀ ದೂರ ಮತ್ತು ಚೆನ್ನೈಗೆ ದಕ್ಷಿಣ ಆಗ್ನೇಯ ದಿಕ್ಕಿನಿಂದ 450 ಕಿಮೀ ದೂರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಭೂಭಾಗಗಳತ್ತ ಮುನ್ನುಗ್ಗುತ್ತಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ ಅದರ ತೀವ್ರತೆಯ ಪ್ರಮಾಣ ಅರಿವಾಗಲಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications