ಕೊಪ್ಪಳದಲ್ಲಿ 379 ಚಿನ್ನದ ನಾಣ್ಯ ಪತ್ತೆ, ಇಬ್ಬರ ಬಂಧನ

ಕಾರಟಗಿ ಸಮೀಪದ ತೊಂಡಿಹಾಳ ಗ್ರಾಮದ ನಿವಾಸಿ ನವೋಧರ ಹಾಗೂ ಮುಂಜುನಾಥ ಎಂಬುವವರು ಕೆಲವು ದಿನಗಳ ಹಿಂದೆ ಹಳ್ಳದಲ್ಲಿ ಮರಳು ಅಗೆಯುವಾಗ, ಸಣ್ಣ ಮಣ್ಣಿನ ಕುಡಿಕೆ ಸಿಕ್ಕಿತ್ತು ಅದರಲ್ಲಿ 379 ಚಿನ್ನದ ನಾಣ್ಯಗಳು ದೊರಕಿದ್ದವು. ವ್ಯಕ್ತಿಯೊಬ್ಬರಿಗೆ ಅದನ್ನು 24 ಸಾವಿರ ರೂ.ಗಳಿಗೆ ಮಾರಾಟ ಮಾಡಲು ಬುಧವಾರ ಇವರು ಯತ್ನಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.
ಮಣ್ಣಿನ ಕುಡಿಕೆಯೊಳಗೆ ಸಿಕ್ಕಿದ ಪ್ರತಿ ನಾಣ್ಯಗಳು 0.380 ಮಿಲಿ ಗ್ರಾಂ ಹೊಂದಿದ್ದು, ಒಟ್ಟು ನಾಣ್ಯಗಳ ತೂಕ 144. ಗ್ರಾಂ ಆಗಿದೆ. ಒಟ್ಟು ಚಿನ್ನದ ನಾಣ್ಯಗಳ ಬೆಲೆ ಸುಮಾರು 3 ಲಕ್ಷ ರೂ.ಗಳಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಇಬ್ಬರಿಂದ ನಾಣ್ಯಗಳನ್ನು ಖರೀದಿಸಲು ಬಂದಿದ್ದ ವ್ಯಕ್ತಿಯೇ ಪೊಲೀಸರಿಗೆ ದೂರು ನೀಡಿದ್ದರಿಂದ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಮರಳು ಅಗೆಯುವಾಗ ಸಿಕ್ಕಿದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡರೆ, ಪೊಲೀಸರಿಗೆ ಮಾಹಿತಿಯನ್ನು ನೀಡಿದರೆ ಇಬ್ಬರು ಆರೋಪಿಗಳು ಮಾರಾಟ ಮಾಡಲು ಯತ್ನಿಸಿದ್ದರು. ಬುಧವಾರ 50 ನಾಣ್ಯಗಳನ್ನು 24 ಸಾವಿರ ರೂ.ಗಳಿಗೆ ಅಂದಯ್ಯ ಸ್ವಾಮಿ ಅವರಿಗೆ ಮಾರಲು ಹೊರಟಿದ್ದರು. ಅವರು ನಾಣ್ಯಗಳು ಎಲ್ಲಿ ಸಿಕ್ಕವು ಎಂದು ವಿಚಾರಿಸಿದಾಗ, ಅವರು ಪರಾರಿಯಾಗಿದ್ದರು. ಇದರಿಂದ ಅನುಮಾನಗೊಂಡ ಆತ, ಪೊಲೀಸರಿಗೆ ಮಾಹಿತಿ ನೀಡಿದ್ದ.
ನಿಧಿ ಆಸೆಗಾಗಿ ಬಂದಿ ಸಿಕ್ಕಿ ಬಿದ್ದರು : ನಿಧಿ ಆಸೆಗಾಗಿ ಮಶಮ್ಮಾ ದೇವಾಲಯದ ಗರ್ಭಗುಡಿಯನ್ನು ಅಗೆದ ಆಂಧ್ರ ಮೂಲದ ಹಾಗೂ ಸ್ಥಳೀಯ ಕೆಲವು ಕಿಡಿಗೇಡಿಗಳು ಸ್ಥಳೀಯರ ಕೈಗೆ ಸಿಕ್ಕಿ ಪೊಲೀಸರ ಅತಿಥಿಯಾದ ಘಟನೆ ಗುಲ್ಬರ್ಗ ಜಿಲ್ಲೆ ಸೇಡಂ ತಾಲೂಕಿನ ಚಿಟಕನಪಲ್ಲಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಆಂಧ್ರ ಪ್ರದೇಶದ ಮೆಹಬೂಬ ನಗರ ಮೂಲದ ನಾಲ್ವರನ್ನು ಕಂಡ ಗ್ರಾಮಸ್ಥರು ಅವರ ಕುರಿತು ವಿಚಾರಣೆ ನಡೆಸಿದ್ದಾರೆ. ಆದರೆ, ಅವರು ದೇವರ ದರ್ಶನಕ್ಕೆ ಬಂದಿರುವುದಾಗಿ ಉತ್ತರಿಸಿದ್ದರು. ನಂತರ ದೇವಾಲಯದ ಬಳಿ ನಿಧಿಆಸೆಗಾಗಿ ಅಗೆಯುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಪೊಲೀಸರು ಅವರ ವಿಚಾರಣೆ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications