SSLC Exam: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ; ಸಚಿವ ಮಧು ಬಂಗಾರಪ್ಪ
ಈ ವರ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕಗಳನ್ನು ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಕಳೆದ ವರ್ಷ ಗ್ರೇಸ್ ಅಂಕಗಳನ್ನು ನೀಡಿದ್ದು ವಿವಾದಕ್ಕೆ ಕಾರಣವಾದ ಬಳಿಕ ಈ ವರ್ಷ ಗ್ರೇಸ್ ಅಂಕಗಳನ್ನು ನೀಡದೇ ಇರಲು ನಿರ್ಧಾರ ಮಾಡಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಹತ್ತಿರವಾಗುತ್ತಿದ್ದು, ವೆಬ್ ಕಾಸ್ಟಿಂಗ್ ಮತ್ತು ಸಿಸಿಟಿವಿ ನಿಯಮಗಳನ್ನು ಕಠಿಣ ಪ್ರಯೋಗಕ್ಕೆ ಮುಂದಾಗಿದೆ. ಫಲಿತಾಂಶಗಳನ್ನು ಸುಧಾರಣೆ ಮಾಡುವುದು ಎನ್ನುವುದರ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸೋಮವಾರ ಬೆಂಗಳೂರಿನ ಬನಶಂಕರಿಯ ಡಿಸಿಇಆರ್ ಟಿಯಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದ್ದು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಈ ಬಾರಿ ಪರೀಕ್ಷೆಯಲ್ಲಿ ಜಾರಿ ಮಾಡಲಿರುವ ಕಠಿಣ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಅಧಿಕಾರಿಗಳ ಜೊತೆ ಪರಿಶೀಲನಾ ಸಭೆಗಳನ್ನು ನಡೆಸಿದ್ದೇವೆ, ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಮತ್ತ ಶಾಲೆಗೆ ಸೇರುವ ವ್ಯವಸ್ಥೆ ಕೂಡ ಇದ್ದು ಅದನ್ನು ಮಕ್ಕಳು ಅರ್ಥ ಮಾಡಿಕೊಳ್ಳುತ್ತಾರೆ. ಜಿಲ್ಲಾ ಅಧಿಕಾರಿಗಳ ಜೊತೆ ಕೂಡ ಪರಿಶೀಲನಾ ಸಭೆಗಳನ್ನು ನಡೆಸಿದ್ದು ಈ ಬಾರಿ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ, ವಿದ್ಯಾರ್ಥಿಗಳ ಮೇಲ ಒತ್ತಡ ಹೇರಬಾರದು ಎಂದು ಹೇಳಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವರ್ಷ ನೀಡಿದ್ದ ಗ್ರೇಸ್ ಅಂಕಗಳನ್ನು ವಿರೋಧಿಸಿದರು. ಈ ವರ್ಷ ಯಾವುದೇ ಕಾರಣಕ್ಕೂ ಗ್ರೇಸ್ ಅಂಕಗಳನ್ನು ನೀಡುವುದಿಲ್ಲ, ಕೋವಿಡ್ ಸಮಯದಲ್ಲಿ ನೀಡಲಾದ 10% ಅಂಕಗಳನ್ನು ನಾವು ಪರಿಶೀಲನೆ ಮಾಡುತ್ತೇವೆ, ಈ ವರ್ಷ ಯಾವುದೇ ಗ್ರೇಸ್ ಅಂಕಗಳು ಇರುವುದಿಲ್ಲ ಎಂದು ಹೇಳಿದರು.
ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶಗಳನ್ನು ಸುಧಾರಿಸಲು ದಿನಕ್ಕೆ ಒಂದು ಅಂಕ ಕಾರ್ಯಕ್ರಮ, ಮುಂಜಾನೆ ಅಧ್ಯಯನ, ವಿಶೇಷ ತರಗತಿಗಳು, ಅಣಕು ಪರೀಕ್ಷೆಗಳು ಮತ್ತು ಗುಂಪು ಅಧ್ಯಯನ ಅವಧಿಗಳಂತಹ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದರು.
ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕದ ಕಾರಣಕ್ಕಾಗಿ ಗ್ರೇಸ್ ಅಂಕಗಳನ್ನು ನೀಡಲಾಗಿತ್ತು, ಈ ವರ್ಷ ಹೆಚ್ಚುವರಿ ಅಂಕಗಳನ್ನು ಕೊಡುವುದಿಲ್ಲ. ಕಳೆದ ವರ್ಷದಿಂದ ನಾವು 20% ಗ್ರೇಸ್ ಅಂಕಗಳ ಕ್ರಮವನ್ನು ಪುನರಾವರ್ತನೆ ಮಾಡುವುದಿಲ್ಲ ಎಂದು ಹೇಳಿದರು.
ಚರ್ಚೆ ವೇಳೆ ವಿದ್ಯಾರ್ಥಿಗಳು ಸ್ಮಾರ್ಟ್ ತರಗತಿ ಕೊಠಡಿಗಳು ಮತ್ತು ಇಂಟರ್ನೆಟ್ ಸೌಲಭ್ಯಗಳನ್ನು ಕೊಡುವಂತೆ ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆಯುವ ಶೀಘ್ರದಲ್ಲೇ ಇವುಗಳ ವ್ಯವಸ್ಥೆ ಮಾಡುವ ಕೆಲಸ ಮಾಡುತ್ತದೆ. ಕೌಶಲ್ಯ ಆಧಾರಿತ ಕಲಿಕಾ ಕಾರ್ಯಕ್ರಮಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ತಿಳಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications