ಉತ್ತರ ಕರ್ನಾಟಕಕ್ಕೆ ತಪ್ಪದ ಅನ್ಯಾಯ: ಕೇಂದ್ರದಿಂದ ಅನ್ಯಾಯ ಆರೋಪ, ಏನಿದು ?
ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಅನ್ಯಾಯವಾಗುವುದು ತಪ್ಪುತ್ತಿಲ್ಲ. ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಸೇವೆ, ಮೂಲಸೌಕರ್ಯ ಹಾಗೂ ಶಿಕ್ಷಣ ಸೇರಿದಂತೆ ಕೆಲವು ವಿಚಾರಗಳಲ್ಲಿ ಸಮಸ್ಯೆ ಆಗುತ್ತಿರುವ ಬಗ್ಗೆ ಆಗಾಗ ವಿರೋಧಗಳು ವ್ಯಕ್ತವಾಗುತ್ತಲ್ಲೇ ಇವೆ. ಇದೀಗ ಏಮ್ಸ್ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಚರ್ಚೆ ನಡೆದಿದೆ. ಇನ್ನು ಏಮ್ಸ್ನಿಂದ ಕರ್ನಾಟಕ ವಂಚಿತವಾಗುತ್ತಲ್ಲೇ ಇದೆ. ದೇಶದಲ್ಲೇ ಈಶಾನ್ಯ ಭಾರತದ ಕೆಲವು ಪ್ರಮುಖ ರಾಜ್ಯಗಳನ್ನು ಹೊರತುಪಡಿಸಿ ದೇಶದಾದ್ಯಂತ ಏಮ್ಸ್ ಆಸ್ಪತ್ರೆಗಳು ಇವೆ. ಆದರೆ, ಏಮ್ಸ್ ಆಸ್ಪತ್ರೆಯಿಂದ ವಂಚಿತವಾಗಿರುವ ಪ್ರಮುಖ ರಾಜ್ಯ ಕರ್ನಾಟಕ ಆಗಿದೆ.
ಹೌದು ದೇಶದ ಎಲ್ಲಾ ರಾಜ್ಯಗಳಲ್ಲೂ ಏಮ್ಸ್ ಆಸ್ಪತ್ರೆ ಇದೆ. ಆದರೆ ದಕ್ಷಿಣ ಭಾರತದಲ್ಲಿ ಹಾಗೂ ದೇಶದಲ್ಲಿ ಏಮ್ಸ್ ಆಸ್ಪತ್ರೆ ಇಲ್ಲದೆ ಇರುವ ಪ್ರಮುಖ ರಾಜ್ಯ ಕರ್ನಾಟಕ ಮಾತ್ರವಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆಯನ್ನು ಕೊಡುವುದಕ್ಕೆ ಏಮ್ಸ್ ಬೇಕಿದೆ ಎನ್ನುವುದು ದಶಕಗಳ ಬೇಡಿಕೆಯಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿದೆ. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಈ ಸಂಬಂಧ ಪ್ರತಿಕ್ರಿಯಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಈ ಸಂಬಂಧ ರಾಜ್ಯದ ಕಾಂಗ್ರೆಸ್ ಸಂಸದ ಜಿ ಕುಮಾರ್ ನಾಯಕ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಮ್ಸ್ನಿಂದ ವಂಚಿತವಾಗಿರುವ ಭಾರತದ ಏಕೈಕ ಪ್ರಮುಖ ರಾಜ್ಯವೆಂದರೆ ಅದು ಕರ್ನಾಟಕ. ಕಲ್ಯಾಣ ಕರ್ನಾಟಕ ಹಾಗೂ ರಾಯಚೂರಿನ ಜನರಿಗೇಕೆ ಈ ರೀತಿ ಅನ್ಯಾಯ ಮಾಡಲಾಗುತ್ತಿದೆ. ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳ ಪೈಕಿ ಎರಡನೇ ಅಗ್ರಗಣ್ಯ ರಾಜ್ಯ ಕರ್ನಾಟಕ. ದೇಶ ಕಟ್ಟಲು ಇಷ್ಟು ದೊಡ್ಡ ಮಟ್ಟದ ಕೊಡುಗೆ ನೀಡುತ್ತಿರುವ ಹಾಗೂ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಲೇ ಇದೆ ಎಂದು ಅವರು ದೂರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಈ ವಿಷಯವನ್ನು ಮುನ್ನೆಲೆಗೆ ತರಲು ಎಷ್ಟೇ ಪ್ರಯತ್ನ ಪಡುತ್ತಿದ್ದರೂ ಕೇಂದ್ರ ಸರ್ಕಾರವು ನಮ್ಮ ವಾದವನ್ನು ಹಗುರವಾಗಿ ನೋಡುತ್ತಿದೆ. ಅಷ್ಟಕ್ಕೂ ರಾಯಚೂರು ಹಾಗೂ ಯಾದಗಿರಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಏಕಿಷ್ಟು ನಿರ್ಲಕ್ಷ್ಯ, 2025ರಲ್ಲಾದರೂ ಈ ಎರಡೂ ಜಿಲ್ಲೆಗಳ ಬಗ್ಗೆ ಕಿಂಚಿತ್ತಾದ್ರೂ ಕಾಳಜಿ ತೋರುತ್ತದೆಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ರಾಯಚೂರಿನಲ್ಲಿ ಏಮ್ಸ್ಗೆ ಪತ್ರ: ಇನ್ನು ಕರ್ನಾಟಕದ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಈ ಸಂಬಂಧ ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಸಹ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಏಮ್ಸ್ ಅವಶ್ಯಕತೆ ಇದೆ ಎಂದು 2023ರಲ್ಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರು ಇತರ ಪ್ರದೇಶಗಳಿಗಿಂತ ಕಡಿಮೆ ಆರೋಗ್ಯ, ಶಿಕ್ಷಣ ಹಾಗೂ ತಲಾ ಆದಾಯ ಇದೆ. ಅಲ್ಲದೆ ಹಲವು ಕಾರಣಗಳಿಗೆ ರಾಯಚೂರಿಗೆ ಸದೃಢ ವೈದ್ಯಕೀಯ ಸಂಸ್ಥೆಗಳ ಅವಶ್ಯಕತೆ ಇದೆ ಎಂದು ಹೇಳಲಾಗಿತ್ತು. ಇದಾಗಿ ಎರಡು ವರ್ಷವಾದರೂ ಈ ನಿಟ್ಟಿನಲ್ಲಿ ಯಾವುದೇ ಪ್ರಗತಿ ಆಗಿಲ್ಲ ಎನ್ನಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications