ಎಂಎಂ ಕಲಬುರ್ಗಿ ಕೊಂದವರನ್ನು ಬಂಧಿಸಿಲ್ಲ : ಸಿಐಡಿ ಸ್ಪಷ್ಟನೆ
ಬೆಂಗಳೂರು, ಡಿಸೆಂಬರ್ 31 : ಖ್ಯಾತ ಸಂಶೋಧಕ ಎಂಎಂ ಕಲಬುರ್ಗಿ ಅವರ ವಿವಾದಾತ್ಮಕ ಹತ್ಯೆಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಎಂದು ತನಿಖೆ ನಡೆಸುತ್ತಿರುವ ಸಿಐಡಿ ಶನಿವಾರ ಸ್ಪಷ್ಟಪಡಿಸಿದೆ.
ಕಲಬುರ್ಗಿ ಅವರ ಹತ್ಯೆಯನ್ನು ಮಾಡಿರುವ ಇಬ್ಬರು ವ್ಯಕ್ತಿಗಳನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ ಎಂದು ಹಬ್ಬಿರುವ ಸುದ್ದಿಯನ್ನು ಕೇವಲ ಗಾಳಿಸುದ್ದಿ ಎಂದಿರುವ ಸಿಐಡಿ, ಅಂತಹ ಯಾವುದೇ ವ್ಯಕ್ತಿಗಳನ್ನು ಬಂಧಿಸಲಾಗಿಲ್ಲ, ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು ಎಂದು ಹೇಳಿದೆ.
"ಇಂತಹ ಸುಳ್ಳು ಸುದ್ದಿ ಹಬ್ಬಿರುವುದು ನಮ್ಮ ಕಿವಿಗೆ ಬಿದ್ದಿದೆ. ಒಂದು ವೇಳೆ ಬಂಧಿಸಿದ್ದರೆ ನಾವೇ ಅದನ್ನು ಪ್ರಕಟಿಸುತ್ತೇವೆ" ಎಂದು ಹಿರಿಯ ಸಿಐಡಿ ಅಧಿಕಾರಿಯೊಬ್ಬರು ಒನ್ಇಂಡಿಯಾಗೆ ತಿಳಿಸಿದರು.

ಇಬ್ಬರನ್ನು ಬಂಧಿಸಿರುವುದು ಮಾತ್ರವಲ್ಲ, ಅವರಿಬ್ಬರೂ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆಸ್ತಿ ವಿಷಯವಾಗಿ ಅವರೊಂದಿಗೆ ಜಗಳವಿತ್ತು. ಈ ಕಾರಣಕ್ಕಾಗಿಯೇ ಅವರನ್ನು ಕೊಂದಿದ್ದೇವೆ ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಇದನ್ನು ಸಿಐಡಿ ಸಂಪೂರ್ಣವಾಗಿ ಅಲ್ಲಗಳೆದಿದೆ.
ಕೆಲ ಕನ್ನಡ ಮಾಧ್ಯಮಗಳಲ್ಲಿ ಬಂಧನದ ಸುದ್ದಿ ಬಂದಿರುವುದು ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಸಿಐಡಿ ತನ್ನ ತನಿಖೆಯನ್ನು ಮುಗಿಸಿದ್ದು, ಇಂಥದೇ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಲಿರುವ ವರದಿಗೆ ಕಾಯುತ್ತಿದೆ.
ವಿಚಾರವಾದಿ ನರೇಂದ್ರ ಧಾಬೋಲ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಬಂಧಿತನಾಗಿರುವ ವ್ಯಕ್ತಿಯ ವಿಚಾರಣೆಯನ್ನು ಕರ್ನಾಟಕದ ಸಿಐಡಿ ಕೂಡ ಮಾಡಿದ್ದು, ಕಲಬುರ್ಗಿ ಅವರ ಹತ್ಯೆಯಲ್ಲಿ ಅವರ ಕೈವಾಡವೇನಾದರೂ ಇದೆಯಾ ಎಂದು ತನಿಖೆ ನಡೆಸುತ್ತಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications