ಏ.30ರಂದು ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರವಿಲ್ಲ
ಬೆಂಗಳೂರು, ಏ. 11 : 'ರಸ್ತೆ ಸಾರಿಗೆ ಮತ್ತು ಸುರಕ್ಷತಾ ವಿಧೇಯಕ-2015'ದನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಏ.30ರಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಮುಷ್ಕರಕ್ಕೆ ಕರೆ ನೀಡಿದೆ. ಆದ್ದರಿಂದ ಬಸ್ಸುಗಳು ರಸ್ತೆಗಿಳಿಯುವುದಿಲ್ಲ.
ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಐಟಿಯು ಗೌರವಾಧ್ಯಕ್ಷ ಎಸ್. ಪ್ರಸನ್ನಕುಮಾರ್ ಮುಷ್ಕರದ ಬಗ್ಗೆ ಮಾಹಿತಿ ನೀಡಿದರು. ದೇಶಾದ್ಯಂತ ವಿವಿಧ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಕರ್ನಾಟಕದಲ್ಲಿಯೂ ಬಸ್ ಸಂಚಾರ ಸ್ಥಗಿತಗೊಳಿಸಿ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದರು. [ಏ.18ರಂದು ಕರ್ನಾಟಕ ಬಂದ್]

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ 'ರಸ್ತೆ ಸಾರಿಗೆ ಮತ್ತು ಸುರಕ್ಷತಾ ವಿಧೇಯಕ-2015' ಚಾಲಕರ ಪಾಲಿಗೆ ಮಾರಕವಾಗಿದೆ ಎಂದು ಹೇಳಿದ ಪ್ರಸನ್ನ ಕುಮಾರ್, ವಿಧೇಯಕ ಜಾರಿ ವಿರೋಧಿಸಿ ಏ.30ರ ಗುರುವಾರ ದೇಶಾದ್ಯಂತ ಸಾರಿಗೆ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. [5,266 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್ ಟಿಸಿ]
ಬಸ್ ಸಂಚಾರವಿಲ್ಲ : ಕರ್ನಾಟಕದ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಸ್ಥೆಗಳ ಸುಮಾರು 1 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಸ್ ಸೇವೆಗಳನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಚಾಲಕರು ಮತ್ತು ನಿರ್ವಾಹಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಸನ್ನ ಕುಮಾರ್ ಹೇಳಿದರು.
ತಜ್ಞರೊಂದಿಗೆ ಚರ್ಚೆ ನಡೆಸಿ : ವಿಧೇಯಕದ ಕರಡು ಪ್ರತಿಯ ಪ್ರಕಾರ ಚಾಲಕರ ವಾಹನವನ್ನು ಓವರ್ ಟೇಕ್ ಮಾಡುವುದು ಸೇರಿದಂತೆ ಸಣ್ಣ ತಪ್ಪುಗಳನ್ನು ಮಾಡಿದರೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಈ ವಿಧೇಯಕ ಜಾರಿಗೆ ಬಂದರೆ ಚಾಲಕರು ಜೈಲು ಪಾಲಾಗುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಸಾರಿಗೆ ತಜ್ಞರೊಂದಿಗೆ ಚರ್ಚಿಸದೆ ಇಂತಹ ವಿಧೇಯಕವನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿ ಚಾಲಕರು ಮತ್ತು ನಿರ್ವಾಹಕರು ಪ್ರತಿಭಟನೆ ನಡೆಸಲಿದ್ದಾರೆ. ವಿವಿಧ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಲಿವೆ ಎಂದು ತಿಳಿಸಿದರು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications