ಸದನದಲ್ಲಿ ಸದ್ದು ಮಾಡಿದ ಜೈನ ಮುನಿ ಹತ್ಯೆ ಪ್ರಕರಣ: ಪೊಲೀಸರು ಸಮರ್ಥರು, ಸಿಬಿಐ ಅಗತ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು,ಜುಲೈ11: ಜೈನಮುನಿಗಳ ಕೊಲೆ ಪ್ರಕರಣ ಸಿಬಿಐ ತನಿಖೆ ಅಗತ್ಯವಿಲ್ಲ, ಕರ್ನಾಟಕ ಪೊಲೀಸರ ಕೈಯಿಂದಲೇ ತನಿಖೆ ಮಾಡಿಸಿ ಕಠಿಣ ಶಿಕ್ಷೆ ವಿಧಿಸಲಾಗುವುದು. ನಮ್ಮ ಪೊಲೀಸರು ಸಮರ್ಥರಿದ್ದಾರೆ ಎಂದು ಸದನದಲ್ಲಿ ಮುಖ್ಯಮಂನತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ನಾಯಕರು ಜೈನ ಮುನಿ ಹತ್ಯೆ ಪ್ರಕರಣವನ್ನ ಸಿಬಿಐ ಗೆ ನೀಡಲು ಆಗ್ರಹಿಸಿದ್ದು, ಸದನದಲ್ಲಿ ಜೈನ ಮುನಿ ಹತ್ಯೆ ಪ್ರಕರಣ ಸಾಕಷ್ಟು ಚರ್ಚೆ ನಡೆಸಿದರು, ಚರ್ಚೆಯ ಬಳಿಕ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಈ ಘಟನೆಯ ಕುರಿತು ಉತ್ತರ ನೀಡಿದರು.

ವಿಧಾನಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ,ಬಸವನಗೌಡ ಪಾಟೀಲ್,ಆರ್.ಅಶೋಕ,ಅರಗ ಜ್ಞಾನೇಂದ್ರ,ವಿ.ಸುನೀಲಕುಮಾರ ಅವರ ನಿಯಮ 60ರ ಸೂಚನೆಗೆ ಮುಖ್ಯಮಂತ್ರಿಗಳು ಉತ್ತರಿಸಿ, ಜೈನಮುನಿಗಳ ಕೊಲೆ ಪ್ರಕರಣ,ಕ್ಷುಲ್ಲಕ ಕಾರಣಕ್ಕೆ ಸಂಭವಿಸಿದ ಟಿ.ನರಸಿಪುರ ಕೊಲೆ ಪ್ರಕರಣ ಸೇರಿದಂತೆ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜೈನಮುನಿಗಳ ಕೊಲೆ ಅತ್ಯಂತ ಅಮಾನುಷವಾದುದು. ಯಾರು ಕೊಲೆ ಮಾಡಿದರೂ ಶಿಕ್ಷೆ ಆಗಲೇಬೇಕು. ಪೊಲೀಸರು ದೂರು ಬಂದ 6 ಗಂಟೆಗೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ನಿರಂತರ 7 ಗಂಟೆಗಳ ಕಾಲ ಕೊಳವೆಬಾವಿಯಿಂದ ಪ್ರಯತ್ನಿಸಿ ಮೃತದೇಹವನ್ನು ತೆಗೆದಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದ್ದು, ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಒತ್ತಡ ಮತ್ತು ಪ್ರಭಾವಗಳಿಗೆ ಮಣಿಯದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಕೆಲಸ ಮಾಡಲಾಗುವುದು ಎಂದರು.
ಜೈನಮುನಿಗಳ ಕೊಲೆ ಪ್ರಕರಣ ಸಿಬಿಐ ತನಿಖೆ ಅಗತ್ಯವಿಲ್ಲ. ಕರ್ನಾಟಕ ಪೊಲೀಸರ ಕೈಯಿಂದಲೇ ತನಿಖೆ ಮಾಡಿಸಿ ಕಠಿಣ ಶಿಕ್ಷೆ ವಿಧಿಸಲಾಗುವುದು. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು ಟಿ.ನರಸಿಪುರ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವಿದ್ದರೇ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಎಲ್ಲ ಪ್ರಕರಣಗಳನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದರು.
ಇದೇ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಜೈನಮುನಿಗಳ ಆಶ್ರಮ ಹಾಗೂ ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಾಸ್ತವ ವರದಿಯನ್ನು ಸದನದ ಮುಂದಿಟ್ಟರು ಮತ್ತು ಈ ವಿಷಯದಲ್ಲಿ ನಮ್ಮ ಪೊಲೀಸರು ಎಲ್ಲ ಆಯಾಮಗಳಿಂದಲೂ ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದು,ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.
-
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ









Click it and Unblock the Notifications