ಮದರಾಸಗಳಲ್ಲಿ ಸ್ಪರ್ಧಾತ್ಮಕ ಶಿಕ್ಷಣ ಸಿಗುತ್ತಿಲ್ಲ, ಪೋಷಕರೇ ಹೇಳುತ್ತಿದ್ದಾರೆ: ಬಿ.ಸಿ. ನಾಗೇಶ್
ಬೆಂಗಳೂರು, ಏ. 19: ಮದರಸಾಗಳಲ್ಲಿ ಕಲಿತ ಮಕ್ಕಳಿಗೆ ಜಾಗತಿಕವಾಗಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಬಳಿಕ ಮಾತನಾಡಿದ ಅವರು, ಮದರಸಾಗಳಲ್ಲಿ ಕಲಿತ ಮಕ್ಕಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಸ್ಪರ್ಧಾತ್ಮಕ ಶಿಕ್ಷಣ ಅಲ್ಲಿ ಸಿಗುತ್ತಿಲ್ಲ ಎಂದು ಪೋಷಕರೇ ತಿಳಿಸಿದ್ದಾರೆ. ಮದರಸಾಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಅಲ್ಲಿ ಗುಣಮಟ್ಟದ ಶಿಕ್ಷಣ ನೀಡಿ ಎಂಬ ಬೇಡಿಕೆ ಬಂದಿಲ್ಲ. ಆದರೆ ಮದರಾಸಗಳಲ್ಲಿ ಶಿಕ್ಷಣ ಸರಿಯಿಲ್ಲ ಎಂಬುದನ್ನು ತುಂಬಾ ಪೋಷಕರು ಹೇಳಿದ್ದಾರೆ. ಮದರಸಾಗಳಿಂದ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಬೇಡಿಕೆ ಬಂದರೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.
ಟಿಪ್ಪು ಕುರಿತ ಪಠ್ಯ ಕಡಿತ ಜಾಸ್ತಿ ಮಾಡಿಲ್ಲ:
ಟಿಪ್ಪು ಸುಲ್ತಾನ್ ಕುರಿತ ಪಠ್ಯ ಹೆಚ್ಚು ಕಡಿತ ಮಾಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಟಿಪ್ಪು ಪಠ್ಯದ ಕುರಿತು ಆಕ್ಷೇಪ ವ್ಯಕ್ತಪಡಿಸಿ ಅಪ್ಪಚ್ಚು ರಂಜನ್ ಪ್ರಸ್ತಾವನೆ ಇಟ್ಟಿದ್ದರು. ಟಿಪ್ಪು ಪಾಠವನ್ನೇ ಕೈ ಬಿಡಿ ಅಥವಾ ಟಿಪ್ಪುವಿನ ಎಲ್ಲಾ ಮುಖವನ್ನು ಪಾಠದಲ್ಲಿ ತೋರಿಸಿ ಎಂಬ ಬೇಡಿಕೆಯಿದೆ. ಟಿಪ್ಪು ಸುಲ್ತಾನ್ ಕುರಿತ ದಾಖಲೆ ಇಲ್ಲದ ಕೆಲವು ವಿಷಯಗಳನ್ನು ಕೈ ಬಿಡಲಾಗಿದೆ. ಆದರೆ, ಮೈಸೂರು ಹುಲಿ ಎಂಬ ಬಿರುದು ಕೈ ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ:
ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ವಿಚಾರವಾಗಿ ಚರ್ಚೆ ನಡೆದಿದೆ. ಮಹಾಭಾರತ, ಪಂಚತಂತ್ರ ಕಥೆ, ರಾಮಾಯಣ ಸೇರಿದಂತೆ ಎಲ್ಲಾ ವಿಚಾರಗಳನ್ನು ನೈತಿಕ ಶಿಕ್ಷಣದಲ್ಲಿಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಒಳ್ಳೆಯ ಗುಣ ಬೆಳೆಸುವ ಸಲುವಾಗಿ ನೈತಿಕ ಪಾಠ ಮಾಡಲು ಚಿಂತನೆ ಮಾಡಿದ್ದೇವೆ. ಮಾರಲ್ ಸೈನ್ಸ್ ಕೇವಲ ಭಗವದ್ಗೀತೆಗೆ ಸೀಮಿತವಾಗಿಲ್ಲ. ಮಕ್ಕಳಲ್ಲಿ ನೈತಿಕ ಗುಣ ಹೆಚ್ಚಿಸುವ ಭಾಗವನ್ನು ಸೇರಿಸುತ್ತೇವೆ. ಯಾವ ಶಾಲೆಯಲ್ಲಿ ಯಾವ ಧರ್ಮದವರು ಹೆಚ್ಚಾಗಿದ್ದರೋ ಆ ಧರ್ಮದ ವಿದ್ಯಾರ್ಥಿಗಳಿಗೆ ಅನುಗುಣವಾಗಿ ನೀತಿಪಾಠ ಬೋಧನೆಗೆ ಅವಕಾಶ ಮಾಡಿಕೊಡುತ್ತೇವೆ. ಕುರಾನ್ ಬೈಬಲ್ ಯಾವುದಾದರೂ ಇರಬಹುದು. ಮುಖ್ಯವಾದುದನ್ನು ಸಮಿತಿ ತೀರ್ಮಾನಿಸಿ ಕ್ರಮ ಜರುಗಿಸುತ್ತದೆ ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications