ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಸುರೇಶ್ ಕುಮಾರ್
Recommended Video
ಬೆಂಗಳೂರು, ಸೆಪ್ಟೆಂಬರ್ 29 : ಕಡ್ಡಾಯ ವರ್ಗಾವಣೆ ಬಗ್ಗೆ ಆತಂಕಗೊಂಡಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ವರ್ಗಾವಣೆಗೆ ಹೆದರಿ ಹುಬ್ಬಳ್ಳಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದರು.
ಶಿಕ್ಷಣ ಸಚಿವ ಸುರೇಶ್ ಕುಮಾರ್, "ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಎಂಬ ಪ್ರಕ್ರಿಯೆಯನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.
"ಮುಂದಿನ ಅವಧಿಗೆ ಶಿಕ್ಷಕ ಸ್ನೇಹಿಯಾದ, ಸರಳವಾದ ವರ್ಗಾವಣೆ ಪ್ರಕ್ರಿಯೆಯನ್ನು ರಚನೆ ಮಾಡಲಾಗುತ್ತದೆ. ಈಗಾಗಲೇ ಈ ಕುರಿತು ಕರಡು ಮಸೂದೆ ರಚನೆ ಮಾಡುವ ಕಾರ್ಯ ಆರಂಭವಾಗಿದೆ" ಎಂದು ಸಚಿವರು ತಿಳಿಸಿದ್ದಾರೆ.

ಕಡ್ಡಾಯ ವರ್ಗಾವಣೆಗೆ ಹೆದರಿ ಹುಬ್ಬಳ್ಳಿ ಆನಂದ ನಗರದ ಸರ್ಕಾರಿ ಶಾಲಾ ಶಿಕ್ಷಕ ಸುಭಾಷ್ ತರಲಘಟ್ಟ ಎಂಬುವವರು ಕೋಮಾ ಸ್ಥಿತಿಗೆ ಜಾರಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದ್ದರಿಂದ ಸಚಿವರು ಶಿಕ್ಷಕರು ಆತಂಕಗೊಳ್ಳುವುದು ಬೇಡ ಎಂದು ಹೇಳಿದ್ದಾರೆ.
ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿಯೂ ಕಡ್ಡಾಯ ವರ್ಗಾವಣೆ ಇಲ್ಲ. ಶಿಕ್ಷಣ ಇಲಾಖೆಯಲ್ಲಿ 2017ರಿಂದ ಇದು ಜಾರಿಗೆ ಬಂದಿದೆ. ಇದೇ ಕಾರಣದಿಂದಾಗಿ ಗೊಂದಲ ಉಂಟಾಗಿ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ.
ಈ ವರ್ಷವೂ ಕೌನ್ಸಿಲಿಂಗ್ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಆದ್ದರಿಂದ, ಕೌನ್ಸಿಲಿಂಗ್ ಅನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಿ ಬಳಿಕ ಮಾಡಿ ಮುಗಿಸಲಾಗಿದೆ.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications