ಯಾವ ಇಲಾಖೆಯಲ್ಲೂ ಮುಖ್ಯಮಂತ್ರಿ ಆದೇಶವಿಲ್ಲದೆ ವರ್ಗಾವಣೆ ಮಾಡುವಂತಿಲ್ಲ: ಇವಿ ರಮಣರೆಡ್ಡಿ
ಬೆಂಗಳೂರು, ಮಾರ್ಚ್ 05: ಇನ್ನುಮುಂದೆ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ವರ್ಗಾವಣೆ ಮಾಡುವಾಗ ಮುಖ್ಯಮಂತ್ರಿ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿರಲಿದೆ.
ಹೌದು, ಯಾವುದೇ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡುವ ಮುನ್ನ ಮುಖ್ಯಮಂತ್ರಿ ಒಪ್ಪಿಗೆ ಪಡೆಯಲೇಬೇಕು ಎಂದು ಅಪರ ಮಖ್ಯ ಕಾರ್ಯದರ್ಶಿ ಇವಿ ರಮಣರೆಡ್ಡಿ ಹೇಳಿದ್ದಾರೆ.
ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಅವಶ್ಯವಿರುವ ಸ್ಥಾನಗಳನ್ನು ತುಂಬುವುದನ್ನು ಹೊರತುಪಡಿಸಿ ಬೇರೆ ಯಾವುದೇ ವರ್ಗಾವಣೆಗಳನ್ನು ಮಾಡಲು ಮುಖ್ಯಮಂತ್ರಿಗಳ ಅನುಮತಿ ಪಡೆಯುವುದು ಕಡ್ಡಾಯವೆಂದು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಸೂಚನೆ ನೀಡಿದ್ದಾರೆ.

ಈಗಾಗಲೇ ಇಲಾಖೆಗಳಲ್ಲಿ ಕಡತದ ಟಿಪ್ಪಣಿ, ನಡವಳಿ, ಸ್ವೀಕೃತಿ ಮೇಲಿನ ಷರಾ ರೂಪದಲ್ಲಿ ಮುಖ್ಯಮಂತ್ರಿಯವರಿಂದ ಸ್ವೀಕೃತವಾದ ವರ್ಗಾವಣೆ ಆದೇಶಗಳನ್ನೂ ಸಹ ಕಡತ ರೂಪದಲ್ಲಿ ಸಲ್ಲಿಸಿ, ಮುಖ್ಯಮಂತ್ರಿಗಳ ಆದೇಶವನ್ನೂ ಕಡತ ರೂಪದಲ್ಲಿ ಪಡೆದು ವರ್ಗಾವಣೆ ಮಾಡಲು ಸೂಚಿಸಿದ್ದಾರೆ.
ಈ ಕುರಿತು ಎಲ್ಲ ಇಲಾಖೆ ಮುಖ್ಯಸ್ಥರಿಗೆ ಪತ್ರ ಬರೆದಿರುವ ಅವರು, 2021 ಸಾಮಾನ್ಯ ವರ್ಗಾವಣೆವರೆಗೆ ಯಾವುದೇ ವರ್ಗಾವಣೆಗಳನ್ನು ಮಾಡದಿರಲು ಸರ್ಕಾರ ನಿರ್ಧರಿಸಿದೆ.
ಅಂತಹ ವರ್ಗಾವಣೆಗಳನ್ನು ಇಲಾಖೆ ಮಟ್ಟದಲ್ಲಿ ಮಾಡದೇ ಪ್ರತಿಯೊಂದು ವರ್ಗಾವಣೆಗೂ ಮುಖ್ಯಮಂತ್ರಿಗೆ ಕಡತದಲ್ಲಿ ಸಲ್ಲಿಸಿ ಆದೇಶ ಪಡೆದ ನಂತರ ವರ್ಗಾವಣೆ ಮಾಡುವಂತೆ ಸೂಚಿಸಿದ್ದಾರೆ.
Recommended Video
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications