ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು, ಸೆಪ್ಟಂಬರ್ 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್ಡೌನ್ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು
ವಿಟಿಯು ಕುಲಪತಿ ಸಮಿತಿ:
ಸರ್ಕಾರಿ ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ, ಶುಲ್ಕ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಗಳ ಕುರಿತು ನಿಗಾ ವಹಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ. ಕರಿಸಿದ್ದಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಇದ್ದರೂ ಸಹ ಸಮಿತಿಯ ಬಳಿ ಕೋರಿಕೆ ಸಲ್ಲಿಸಬಹುದು ಎಂದು ವಿವರಿಸಿದರು.
2020-21ನೇ ಸಾಲಿನಲ್ಲಿ 1.93 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 1,83,231 ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಕೋರ್ಸ್ಗೆ ರ್ಯಾಂಕ್ ನೀಡಲಾಗಿದೆ. ಕೃಷಿ ಕೋರ್ಸ್ಗೆ 1.52,518 ಅಭ್ಯರ್ಥಿಗಳು, 1,55,760 ಪಶು ಸಂಗೋಪನೆ, 1,55,910 ಆಯುಷ್ ಕೋರ್ಸ್ ಅಭ್ಯರ್ಥಿಗಳಿದ್ದಾರೆ. ಈ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಯುತ್ತದೆ.
ಈ ಮಧ್ಯೆ ಸೆ.26ರಂದು ಕಾಮೆಡ್-ಕೆ ಸಹ ತನ್ನ ಫಲಿತಾಂಶ ಪ್ರಕಟಿಸಿದೆ. ಇಲ್ಲಿ 44,111 ಅಭ್ಯರ್ಥಿಗಳು ರ್ಯಾಂಕ್ ಪಡೆದಿದ್ದು, ದೇಶದಾದ್ಯಂತ 180ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಮತ್ತು 30ಕ್ಕೂ ಆಧಿಕ ಖಾಸಗಿ ವಿಶ್ವವಿದ್ಯಾಲಯಗಳು ಇಂಜಿನಿಯರಿಂಗ್ ಪ್ರವೇಶಕ್ಕೆ ಕಾಮೆಡ್-ಕೆ ಪರೀಕ್ಷಾ ಫಲಿತಾಂಶ ಪರಿಗಣಿಸಲಾಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications