ನಟಿ ತಮನ್ನಾಗೆ ₹6 ಕೋಟಿ, ರಾಜ್ಯದ ಅಭಿವೃದ್ಧಿಗೆ ಅನುದಾನವಿಲ್ಲ: ವಿಜಯೇಂದ್ರ ತರಾಟೆ
ಮೈಸೂರು ಸ್ಯಾಂಡಲ್ ಸೋಪ್ಗೆ ಕೋಟಿಗಟ್ಟಲೆ ಸಂಭಾವನೆ ನೀಡಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿ ಮಾಡಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗೆ ಅನುದಾನ ಕೊಡುವ ಯೋಗ್ಯತೆ ಇಲ್ಲ, ಆದರೆ ಬಾಲಿವುಡ್ ನಟಿಗೆ 6 ಕೋಟಿ ರೂಪಾಯಿ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ʼಮೈಸೂರು ಸ್ಯಾಂಡಲ್ ಸಂಸ್ಥೆ 1916ರಲ್ಲಿ ನಾಲ್ವಡಿ ಮಹಾರಾಜರು ಹುಟ್ಟು ಹಾಕಿದ್ದರು. ಅಂತಹ ಸಂಸ್ಥೆಗೆ ಬಾಲಿವುಡ್ ತಾರೆಯರನ್ನು ಕರೆತಂದ ಸರ್ಕಾರಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ. ತಮನ್ನಾ ಅವರನ್ನು ರಾಯಭಾರಿ ಮಾಡುವುದು ಅನಿವಾರ್ಯ ಎಂದು ಸಚಿವರು ಹೇಳುತ್ತಾರೆ. ಆದರೆ ಈ ಅನಿವಾರ್ಯ ಮೈಸೂರು ಸ್ಯಾಂಡಲ್ ಸಂಸ್ಥೆಗೆ ಇದೆಯೋ ಅಥವಾ ಇನ್ಯಾರಿಗಾದರೂ ಇದೆಯೋ ಎಂಬ ಬಗ್ಗೆ ನಾಡಿನ ಜನ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರೇ ಹೆಚ್ಚಾಗಿ ಬಳಸುತ್ತಿರುವುದು
ತಮನ್ನಾಗೆ ಭಾರಿ ಸಂಭಾವನೆ ನೀಡಿರುವ ಬಗ್ಗೆ ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್ ಒಡೆಯರ್ ಕೂಡ ಖಂಡಿಸಿದ್ದಾರೆ. ಮೈಸೂರು ಸಂಸ್ಥಾನದ ಅರಸರಾಗಿದ್ದ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕೂಡ ಒಂದು. ಈ ಸಂಸ್ಥೆಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಗುಡುಗಿದ್ದಾರೆ.
1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು ಅಲ್ಲದೆ ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು ಎಂದಿದ್ದಾರೆ. ಇಂತಹ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಆರು ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂದಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾ ಅವರಿಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಸಾವಿರಾರು ಕೋಟಿ ರೂಪಾಯಿಗಳನ್ನು ಜನರಿಗೆ ನೀಡದೇ ಮಾತು ತಪ್ಪಿದೆ. ಈಗ ಪರಭಾಷೆ ನಟಿಗೆ ಮಣೆ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು. ರಾಜ್ಯ ಸರ್ಕಾರ ಈ ಕೂಡಲೇ ಈ ನೇಮಕವನ್ನು ತಕ್ಷಣವೇ ರದ್ದುಗೊಳಿಸಿ ಕನ್ನಡಿಗರ 6.20 ಕೋಟಿ ರೂಪಾಯಿಯನ್ನು ಉಳಿಸಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ. ಆದರೆ ಸರ್ಕಾರವು ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿರುವ ವಿಚಾರವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications