ಕಲಾಂ ಆಶಯದಂತೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ
ಬೆಂಗಳೂರು, ಜುಲೈ 28 : ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಆದರೆ, ಜುಲೈ 28ರ ಮಂಗಳವಾರ ಸರ್ಕಾರಿ ರಜೆ ಇರುವುದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹೇಳಿದ್ದಾರೆ. [ಡಾ.ಕಲಾಂ ಸ್ಫೂರ್ತಿ ತುಂಬುವ ಹೇಳಿಕೆಗಳು]
ಅಬ್ದುಲ್ ಕಲಾಂ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರೂ ಆಗಿರುವುದರಿಂದ ಕೇಂದ್ರ ಸರ್ಕಾರದ ಶಿಷ್ಟಾಚಾರದ ಅನ್ವಯ ಏಳು ದಿನಗಳ ಕಾಲ ರಾಜ್ಯದಲ್ಲಿಯೂ ಶೋಕಾಚರಣೆ ಮಾಡಲಾಗುತ್ತದೆ. ಆದರೆ, ಮಂಗಳವಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸಬೇಕು ಎಂದು ಕೌಶಿಕ್ ಮುಖರ್ಜಿ ಆದೇಶ ಹೊರಡಿಸಿದ್ದಾರೆ. ['ಕ್ಷಿಪಣಿ ಮಾನವ' ಎಪಿಜೆ ಅಬ್ದುಲ್ ಕಲಾಂ ವಿಧಿವಶ]

"In case of my death don't do a National Holiday but work a day extra". ಎಂದು ಅಬ್ದುಲ್ ಕಲಾಂ ಹೇಳಿದ್ದರು. ಅವರ ಆಶಯದಂತೆ ರಾಜ್ಯದಲ್ಲಿ ಸರ್ಕಾರಿ ರಜೆ ನೀಡುವುದಿಲ್ಲ ಎಂದು ಕೌಶಿಕ್ ಮುಖರ್ಜಿ ಸ್ಪಷ್ಟಪಡಿಸಿದ್ದಾರೆ. [ಗಣ್ಯರ ನಿಧನಕ್ಕೆ ರಜೆ ಘೋಷಿಸುವ ಗೀಳು ಸರಕಾರಕ್ಕೆ ಯಾಕೆ?]
ಆದರೆ, ಖಾಸಗಿ ಶಾಲೆಗಳು ಇಂದು ರಜೆ ಘೋಷಿಸಲು ತೀರ್ಮಾನ ಕೈಗೊಂಡಿವೆ. ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಬುಧವಾರ ಶಾಲೆಗಳಲ್ಲಿ ಶೋಕಾಚರಣೆ ನಡೆಸಲು ನಿರ್ಧರಿಸಿದ್ದು, ಮಂಗಳವಾರ ರಜೆ ಘೋಷಿಸಲಿವೆ.
ಸೋಮವಾರ ಸಂಜೆ 6.30ರ ಸಮಯದಲ್ಲಿ ಅಬ್ದುಲ್ ಕಲಾಂ ಅವರು ಮೇಘಾಲಯದ ಶಿಲಾಂಗ್ ಐಐಎಂನಲ್ಲಿ ಉಪನ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾದರು. ತಮಿಳುನಾಡಿನ ರಾಮೇಶ್ವರಂನಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications