Get Updates
Get notified of breaking news, exclusive insights, and must-see stories!

ಕಲಾಂ ಆಶಯದಂತೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ

ಬೆಂಗಳೂರು, ಜುಲೈ 28 : ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಆದರೆ, ಜುಲೈ 28ರ ಮಂಗಳವಾರ ಸರ್ಕಾರಿ ರಜೆ ಇರುವುದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹೇಳಿದ್ದಾರೆ. [ಡಾ.ಕಲಾಂ ಸ್ಫೂರ್ತಿ ತುಂಬುವ ಹೇಳಿಕೆಗಳು]

ಅಬ್ದುಲ್ ಕಲಾಂ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರೂ ಆಗಿರುವುದರಿಂದ ಕೇಂದ್ರ ಸರ್ಕಾರದ ಶಿಷ್ಟಾಚಾರದ ಅನ್ವಯ ಏಳು ದಿನಗಳ ಕಾಲ ರಾಜ್ಯದಲ್ಲಿಯೂ ಶೋಕಾಚರಣೆ ಮಾಡಲಾಗುತ್ತದೆ. ಆದರೆ, ಮಂಗಳವಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸಬೇಕು ಎಂದು ಕೌಶಿಕ್ ಮುಖರ್ಜಿ ಆದೇಶ ಹೊರಡಿಸಿದ್ದಾರೆ. ['ಕ್ಷಿಪಣಿ ಮಾನವ' ಎಪಿಜೆ ಅಬ್ದುಲ್ ಕಲಾಂ ವಿಧಿವಶ]

abdul kalam

"In case of my death don't do a National Holiday but work a day extra". ಎಂದು ಅಬ್ದುಲ್ ಕಲಾಂ ಹೇಳಿದ್ದರು. ಅವರ ಆಶಯದಂತೆ ರಾಜ್ಯದಲ್ಲಿ ಸರ್ಕಾರಿ ರಜೆ ನೀಡುವುದಿಲ್ಲ ಎಂದು ಕೌಶಿಕ್ ಮುಖರ್ಜಿ ಸ್ಪಷ್ಟಪಡಿಸಿದ್ದಾರೆ. [ಗಣ್ಯರ ನಿಧನಕ್ಕೆ ರಜೆ ಘೋಷಿಸುವ ಗೀಳು ಸರಕಾರಕ್ಕೆ ಯಾಕೆ?]

ಆದರೆ, ಖಾಸಗಿ ಶಾಲೆಗಳು ಇಂದು ರಜೆ ಘೋಷಿಸಲು ತೀರ್ಮಾನ ಕೈಗೊಂಡಿವೆ. ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಬುಧವಾರ ಶಾಲೆಗಳಲ್ಲಿ ಶೋಕಾಚರಣೆ ನಡೆಸಲು ನಿರ್ಧರಿಸಿದ್ದು, ಮಂಗಳವಾರ ರಜೆ ಘೋಷಿಸಲಿವೆ.

ಸೋಮವಾರ ಸಂಜೆ 6.30ರ ಸಮಯದಲ್ಲಿ ಅಬ್ದುಲ್ ಕಲಾಂ ಅವರು ಮೇಘಾಲಯದ ಶಿಲಾಂಗ್ ಐಐಎಂನಲ್ಲಿ ಉಪನ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾದರು. ತಮಿಳುನಾಡಿನ ರಾಮೇಶ್ವರಂನಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+