ಕರ್ನಾಟಕ; ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ
ಬೆಂಗಳೂರು, ನವೆಂಬರ್ 17 : ಕರ್ನಾಟಕಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಆಗಬೇಕಿಲ್ಲ. ಕೋವಿಡ್ ನೆಗೆಟಿವ್ ವರದಿ ನೀಡಿದರೆ ಕ್ವಾರಂಟೈನ್ನಿಂದ ವಿನಾಯಿತಿ ಸಿಗಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 7ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ. ಕಡ್ಡಾಯ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ.
ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸಿದರೆ ಕಡ್ಡಾಯ ಕ್ವಾರಂಟೈನ್ನಿಂದ ವಿನಾಯಿತಿ ಸಿಗಲಿದೆ. ಏರ್ ಸುವಿಧಾ ಪೋರ್ಟಲ್ನಲ್ಲಿ ಸ್ವಯಂ ದೃಢೀಕರಣದೊಂದಿಗೆ ಪ್ರಮಾಣ ಪತ್ರ ಅಪ್ ಲೋಡ್ ಮಾಡಬೇಕು.

ಒಂದು ವೇಳೆ ಪ್ರಯಾಣಿಕರು ಆರ್ಟಿಪಿಸಿಆರ್ ಕೋವಿಡ್ ವರದಿ ಹೊಂದಿಲ್ಲವಾದರೆ ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ನಿಗದಿ ಮಾಡಿದ ದರದಂತೆ ಪ್ರಯಾಣಿಕರು ಹಣವನ್ನು ಪಾವತಿ ಮಾಡಬೇಕು.
ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಯಾವುದೇ ಪ್ರಯಾಣಿಕರಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಲಾಗುತ್ತದೆ. ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳದ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್ನಲ್ಲಿರಬೇಕು.
ಮಂಗಳವಾರ ಮಾಹಿತಿಯಂತೆ ಕರ್ನಾಟಕದಲ್ಲಿ 1,336 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 2,100 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,27,241.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Buttermilk Summer Benefits: ಪ್ರತಿದಿನ ಮಜ್ಜಿಗೆ ಕುಡಿಯುವವರು ತಪ್ಪದೇ ತಿಳಿದುಕೊಳ್ಳಬೇಕಾದ ವಿಷಯಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್












Click it and Unblock the Notifications