ಪಠ್ಯಕ್ರಮ ಕಡಿತ ಇಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಅ 16: ಕೊರೊನಾ ಕಾರಣದಿಂದ ಶಾಲೆಗಳು ನಡೆಯುವ ದಿನದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸ ಆಗಿದ್ದರೂ ಸಹ ಪಠ್ಯಕ್ರಮದಲ್ಲಿ ಯಾವುದೇ ಕಡಿಮೆ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಪಠ್ಯ ಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡುವ ಬಗ್ಗೆ ಜನವರಿ-ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಅವರು ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಶನಿವಾರ ಪೂರ್ಣ ದಿನ ಹಾಗೂ ಭಾನುವಾರವೂ ಕೆಲ ಸಮಯ ತರಗತಿ ನಡೆಸಬೇಕು. ಈ ಮೂಲಕ ಬಾಕಿ ಉಳಿದಿರುವ ಎಲ್ಲ ಪಾಠಗಳನ್ನು ಮಕ್ಕಳಿಗೆ ಬೋಧಿಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
"ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ'' ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದರು.

ಬಿಸಿಯೂಟ ಆರಂಭಕ್ಕೆ ಸೂಚನೆ:
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅ.21ರಿಂದ ಶಿಕ್ಷಕರು ಬಿಸಿಯೂಟ ಯೋಜನೆಯನ್ನು ಪುನರಾರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಕೋವಿಡ್-19 ತುರ್ತು ಪರಿಸ್ಥಿತಿ ಹಿನ್ನೆಲ್ಲೆಯಲ್ಲಿ 1-10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಶಾಲೆಗಳಲ್ಲಿ ಬಿಸಿಯೂಟದ ಯೋಜನೆಯನ್ನು ಮತ್ತೆ ಪ್ರಾರಂಭಿಸಬೇಕು ಎಂದು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಬಿಸಿಯೂಟ ಯೋಜನೆಗೆ ಶಿಕ್ಷಕರು ಈ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ.
* ಶಾಲೆಗಳಲ್ಲಿ ಅಡುಗೆಯನ್ನು ತಯಾರು ಮಾಡಲು ಆಹಾರ ಧಾನ್ಯಗಳ ದಾಸ್ತಾನು ಪರಿಶೀಲಿಸಬೇಕು. ಅವಧಿ ಮೀರಿದ ಪದಾರ್ಥಗಳು ಬಳಕೆಯಾಗದಂತೆ ನೋಡಿಕೊಳ್ಳಬೇಕು
* ಶಾಲೆಗಳಲ್ಲಿರುವ ಗ್ಯಾಸ್, ಸ್ಟೌ, ಪರಿಕರಗಳು ದುರಸ್ತಿ ಹೊಂದಿದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಅನುದಾನದಡಿ 5000-8000 ರೂ. ಬಳಸಿಕೊಂಡು ರಿಪೇರಿ ಮಾಡಿಸಬೇಕು.
* ಶಾಲೆಗಳಿಗೆ ಅಕ್ಕಿ ಮತ್ತು ಗೋಧಿ ಸರಬರಾಜು ಆಗುತ್ತಿದೆ. ಉಳಿದ ಆಹಾರ ಪದಾರ್ಥಗಳನ್ನು 5ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗೆ ರೂ.4.97 ಹಾಗೂ 6-10ನೇ ತರಗತಿ ವಿದ್ಯಾರ್ಥಿಗಳಿಗೆ ರೂ.7.45 ಪರಿವರ್ತನಾ ವೆಚ್ಚ ಬಳಸಿಕೊಂಡು ಅಡುಗೆ ತಯಾರಿಸಬೇಕು.
* ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಹಾಗೂ ಅಡುಗೆ ಸಹಾಯಕರು ಎರಡು ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಎರಡು ಡೋಸ್ ಪೂರ್ಣಗೊಂಡಿದ್ದರೆ ಮಾತ್ರ ಅಡುಗೆ ಕೇಂದ್ರಗಳಿಗೆ ಹಾಜರಾಗಬೇಕು. ಶಿಕ್ಷಕರು ಇದನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು.
Recommended Video
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications