SSC ಪರೀಕ್ಷೆಯಲ್ಲಿ ಕನ್ನಡಿಗರಿಗೆ ದ್ರೋಹ ಬಗೆದ ಕೇಂದ್ರ: ಕರವೇ ಆಕ್ರೋಶ
ಬೆಂಗಳೂರು, ಅ 8: "ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಇದು ಭಾರತ ಒಕ್ಕೂಟದಲ್ಲಿ ಕನ್ನಡಿಗರನ್ನು ತುಳಿಯುವ ಹುನ್ನಾರ. ಸರ್ಕಾರ ಕೂಡಲೇ ಪರೀಕ್ಷೆ ಸ್ಥಗಿತಗೊಳಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು"ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
"ರೈಲ್ವೆ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಐಬಿಪಿಎಸ್ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳಲ್ಲೂ ಕನ್ಕಡಿಗರಿಗೆ ಅನ್ಯಾಯವಾಗಿದೆ. SSC ಪರೀಕ್ಷೆಗಳಲ್ಲೂ ಕನ್ನಡದಲ್ಲಿ ಪರೀಕ್ಷೆ ಇಲ್ಲದೆ ಗ್ರಾಮೀಣ ಭಾಗದ, ದುರ್ಬಲ ವರ್ಗಗಳ ಮಕ್ಕಳು ಪರೀಕ್ಷೆ ಎದುರಿಸದಂತೆ ಮಾಡಿರುವ ಹಿಂದಿನ ಕುತಂತ್ರವಾದರೂ ಏನು? ಯಾಕೆ ಈ ಮಲತಾಯಿ ಧೋರಣೆ?"ಎಂದು ನಾರಾಯಣ ಗೌಡ್ರು ಪ್ರಶ್ನಿಸಿದ್ದಾರೆ.
"20,000 ಬಿ ಮತ್ತು ಸಿ ದರ್ಜೆಯ ಹುದ್ದೆಗಳಿಗೆ SSC ಪರೀಕ್ಷೆ ನಡೆಸುತ್ತಿದೆ. ಕರ್ನಾಟಕದಲ್ಲಿ ನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಏನು ಸಮಸ್ಯೆ? ಬೇರೆ ರಾಜ್ಯದವರನ್ನು ಅದರಲ್ಲೂ ವಿಶೇಷವಾಗಿ ಹಿಂದಿ ರಾಜ್ಯದವರನ್ನು ಕರ್ನಾಟಕದಲ್ಲಿ ತುರುಕುವ ಪ್ರಯತ್ನ ಇದಲ್ಲವೇ?"

"SSC ಪರೀಕ್ಷೆಗಳನ್ನು ಕೇವಲ ಹಿಂದಿ-ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದನ್ನು ಗಮನಿಸಿದರೆ ಭಾರತದಲ್ಲಿ ಹಿಂದಿಯೇತರ ನುಡಿಗಳನ್ನು ಆಡುವವರು ಎರಡನೇ ದರ್ಜೆ ಪ್ರಜೆಗಳ ಹಾಗೆ ಒಕ್ಕೂಟ ಸರ್ಕಾರ ನೋಡುತ್ತಿದೆ ಎಂಬುದು ಅರಿವಾಗುತ್ತದೆ. ಇಂಥ ದ್ರೋಹವನ್ನು 75 ವರ್ಷಗಳಿಂದ ಸಹಿಸಿಕೊಂಡುಬಂದಿದ್ದೇವೆ. ಇನ್ನೆಷ್ಟು ಕಾಲ ಸಹಿಸಿಕೊಳ್ಳಬೇಕು?" ಎಂದು ನಾರಾಯಣ ಗೌಡ್ರು ಕಿಡಿಕಾರಿದ್ದಾರೆ.
"ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಏನು ಮಾಡಬೇಕು? ಅವರು ಹೇಗೆ ಪರೀಕ್ಷೆ ಬರೆಯಬೇಕು? ಹಿಂದಿ ತಾಯ್ನುಡಿ ಹೊಂದಿದವರಿಗೆ ಇರುವ ಅವಕಾಶ ಕನ್ನಡಿಗರಿಗೇಕೆ ಇಲ್ಲ? ಯಾಕಿಂಥ ತಾರತಮ್ಯ? ಭಾರತ ಒಕ್ಕೂಟದಲ್ಲಿ ಕನ್ನಡಿಗರು ಇಲ್ಲವೇ? ನಾವು ಮಾಡಿದ ತಪ್ಪಾದರೂ ಏನು?"

"ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ" ಎಂದು ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.
-
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications