ಲಾಕ್ ಡೌನ್; ರಾತ್ರಿ 9ರ ನಂತರ ಸರ್ಕಾರಿ ಬಸ್ ಇಲ್ಲ
ಬೆಂಗಳೂರು, ಏಪ್ರಿಲ್ 27; ಕರ್ನಾಟಕ ಸರ್ಕಾರ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರಲಿದೆ.
ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಸೇವೆಗಳ ಸರಕು ಸಾಗಣೆಗೆ ಮಾತ್ರ ವಾಹನ ಸಂಚಾರ ಇರುತ್ತದೆ. ಖಾಸಗಿ, ಸರ್ಕಾರಿ ಬಸ್ಗಳ ಸಂಚಾರ ರಾಜ್ಯಾದ್ಯಂತ ಸ್ಥಗಿತಗೊಳ್ಳಲಿದೆ.
ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್!
ಬೆಂಗಳೂರು ನಗರದಿಂದ ಇತರ ಪ್ರದೇಶಗಳಿಗೆ ತೆರಳುವ ಜನರು ರಾತ್ರಿ 9 ಗಂಟೆಯೊಳಗೆ ಹೊರಡಬೇಕು. 9 ಗಂಟೆ ಬಳಿಕ ಯಾವುದೇ ಸರ್ಕಾರಿ ಬಸ್ಗಳ ಸಂಚಾರ ಇರುವುದಿಲ್ಲ. ಕೆಎಸ್ಆರ್ಟಿಸಿ ಈ ಕುರಿತು ಟ್ವೀಟ್ನಲ್ಲಿ ಮಾಹಿತಿ ನೀಡಿದೆ.
ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್?
ಸೋಮವಾರ ರಾತ್ರಿ ಬೆಂಗಳೂರಿನಿಂದ ಹೊರ ಹೋಗುವ ಜನರು ಹೆಚ್ಚಿದ್ದ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಸುಮಾರು 300 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿತ್ತು.
ಸರ್ವ ಪಕ್ಷಗಳ ಸಭೆ; ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ
ಮಂಗಳವಾರ ಬೆಳಗ್ಗೆಯಿಂದಲೂ ಸಹ ಸಾವಿರಾರು ಜನರು ಬೆಂಗಳೂರು ನಗರವನ್ನು ಬಿಟ್ಟು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೇರೆ ಪ್ರದೇಶಗಳಿಗೆ ಹೋಗುವವರು 9 ಗಂಟೆಗೆ ನಗರದಿಂದ ಹೊರಡಬೇಕು.
ಆದ್ಯ ಗಮನಕ್ಕೆ
— KSRTC (@KSRTC_Journeys) April 27, 2021
ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳು ಇಂದು ರಾತ್ರಿ 9 ರ ಮೊದಲು ಹೊರಡಲಿವೆ. ಪರಿಷ್ಕೃತ ನಿರ್ಗಮನ ಸಮಯಕ್ಕಾಗಿ https://t.co/jnSXtGfwMG ನಲ್ಲಿ ದಯವಿಟ್ಟು ಪಿಎನ್ಆರ್ ಸ್ಥಿತಿಯನ್ನು ಪರಿಶೀಲಿಸಿ.
ಮಂಗಳವಾರ ರಾತ್ರಿ 9 ರಿಂದ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ. ಲಾಕ್ ಡೌನ್ ಜಾರಿಗೊಂಡ ಬಳಿಕ ಪೊಲೀಸರು ಫ್ಲೈ ಓವರ್, ರಸ್ತೆಗಳನ್ನು ಬಂದ್ ಮಾಡಲಿದ್ದಾರೆ. ಜನರು ಖಾಸಗಿ ವಾಹನಗಳ ಮೂಲಕವೂ ಸಂಚಾರ ನಡೆಸುವಂತಿಲ್ಲ.
ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಮುಂಜಾನೆ 6 ರಿಂದ ದ 10 ಗಂಟೆಯ ತನಕ ಅವಕಾಶ ನೀಡಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಪಾರ್ಸೆಲ್ಗಳನ್ನು ಪಡೆಯಲು ಅವಕಾಶವಿದೆ.