ಪ್ರತ್ಯೇಕ ಧ್ವಜಕ್ಕೆ ಕಾನೂನಿನ ಅಡೆತಡೆಯಿಲ್ಲ : ಜಯಚಂದ್ರ
ಬೆಂಗಳೂರು, ಜುಲೈ 19 : ಕರ್ನಾಟಕಕ್ಕೆ ಪ್ರತ್ಯೇಕ ಬಾವುಟ ರೂಪಿಸಬೇಕೆಂಬ ಸಂಗತಿ, ಅದು ರಾಷ್ಟ್ರದಾದ್ಯಂತ ಸೃಷ್ಟಿಸಿರುವ ವಾದ ವಿವಾದದಿಂದಾಗಿ, ರಾಜ್ಯ ಸರಕಾರಕ್ಕೆ ಅತ್ಯಂತ ಪ್ರತಿಷ್ಠೆಯ ಸಂಗತಿಯಾಗಿ ಪರಿಣಮಿಸಿದೆ.
ಕಾನೂನಾತ್ಮಕವಾಗಿ ಕರ್ನಾಟಕ ಪ್ರತ್ಯೇಕ ಧ್ವಜ ಹೊಂದುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ತನ್ನದೇ ಸ್ವಂತ ಬಾವುಟ ಹೊಂದಲು ಯಾವುದೇ ಕಾನೂನಿನ ತೊಡಕಿರುವುದಿಲ್ಲ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜವಿಲ್ಲವಾದರೂ, ಹಳದಿ ಮತ್ತು ಕೆಂಪು ಬಣ್ಣಗಳಿರುವ, ಕನ್ನಡ ಸಾಹಿತ್ಯ ಪರಿಷತ್ತು ಅಂಗೀಕರಿಸಿರುವ ಬಾವುಟವನ್ನೇ ಕರ್ನಾಟಕದ ಬಾವುಟವೆಂದು ಒಪ್ಪಿಕೊಳ್ಳಲಾಗಿದೆ. ಆದರೆ, ಇದಕ್ಕೆ ಕಾನೂನಿನ ಮಾನ್ಯತೆಯಿಲ್ಲ. ಈ ಕಾರಣದಿಂದಾಗಿ ಪ್ರತ್ಯೇಕ ಧ್ವಜಕ್ಕೆ ರಾಜ್ಯ ಸರಕಾರ ಪಟ್ಟು ಹಿಡಿದಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರಕಾರಕ್ಕೆ ಇದು ಅವಶ್ಯಕವೂ ಆಗಿದೆ.
ನಾಡಗೀತೆಯಾಗ 'ಜಯಭಾರತ ಜನನಿಯ ತನುಜಾತೆ'ಗೂ ಇದೇ ರೀತಿಯ ಅಡೆತಡೆಗಳು ಬಂದಿದ್ದವು. ಆದರೆ, ಈಗ ಅದನ್ನು ನಾಡಗೀತೆಯಾಗಿ ಅಂಗೀಕರಿಸಲಾಗಿದೆ. ಈ ಹಾಡಿಗೆ ಸಾಂವಿಧಾನಾತ್ಮಕವಾಗಿ ಅಥವಾ ಕಾನೂನುಬದ್ಧವಾಗಿ ಮಾನ್ಯತೆ ಇಲ್ಲದಿದ್ದರೂ ಎಲ್ಲ ಸಭೆ ಸಮಾರಂಭಗಳಲ್ಲಿಯೂ ಹಾಡಲಾಗುತ್ತಿಲ್ಲವೆ ಎಂದು ಜಯಚಂದ್ರ ಅವರು ಮರುಪ್ರಶ್ನೆ ಮಾಡಿದ್ದಾರೆ.
ಆದರೂ, ಪ್ರತ್ಯೇಕ ಧ್ವಜದ ಬಗ್ಗೆ ಯಾವುದೇ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಕಾನೂನು ತಜ್ಞರ ಅಭಿಮತ ಮತ್ತು ಇತರ ಕಾನೂನಾತ್ಮಕ ನಿರ್ದೇಶನಗಳನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ಅಡಿ ಇಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಚಿಸಿರುವ ಸಮಿತಿಯೊಂದಿಗೆ ಮೊದಲಿಗೆ ಸಭೆ ನಡೆಸಿ, ಸಾರ್ವಜನಿಕರ ಮುಕ್ತ ಅಭಿಪ್ರಾಯಗಳನ್ನು ಆಲಿಸಿ, ವಿರೋಧ ಪಕ್ಷದ ಅನಿಸಿಕೆಗಳನ್ನು ಕೂಡ ಪರಿಗಣನೆಗೆ ತೆಗೆದುಕೊಂಡು ನಂತರ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವುದಾಗಿ ಅವರು ತಿಳಿಸಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications