Liquor sales banned: ರಾಜ್ಯದ ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಮದ್ಯ ಮಾರಾಟ ಬಂದ್!
Liquor sales banned: ರಾಜ್ಯದ ಪ್ರಮುಖ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್ ಇರಲಿದೆ. ಮದ್ಯ ಮಾರಾಟ ಬಂದ್ ಮಾಡಿ ಇಲ್ಲಿನ ಜಿಲ್ಲಾಡಳಿತ ಆದೇಶ ಮಾಡಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಮದ್ಯ ಮಾರಾಟ ನಿಲ್ಲಿಸಲಾಗುತ್ತದೆ. ಇದೇ ರೀತಿ ಚಿಕ್ಕಮಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಇರುವ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ನಡೆಯಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.
ವಿಶ್ವಹಿಂದೂ ಪರಿಷತ್,ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ದತ್ತಜಯಂತಿಯು ಇಂದಿನಿಂದ (ಡಿಸೆಂಬರ್ 12ರಿಂದ) ಪ್ರಾರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಜೆಲ್ಲೆಯ ವಿವಿಧ ಭಾಗದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಉದ್ದೇಶದಿಂದ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಮಾಡಿದ್ದಾರೆ.

ದತ್ತಜಯಂತಿಯ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಡಿಸೆಂಬರ್ 12ಕ್ಕೆ ಅನಸೂಯ ಜಯಂತಿ ಆಚರಣೆ ನಡೆಯಲಿದೆ. ಇನ್ನು ಅನಸೂಯ ಜಯಂತಿ ಆಚರಣೆಯಲ್ಲಿ ಅಂದಾಜು 2,500 ಜನರಿಂದ 3,000 ಸಾವಿರ ಜನ ಮಹಿಳಾ ಭಕ್ತಾಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಇನ್ನು ಡಿಸೆಂಬರ್ 13ಕ್ಕೆ ಚಿಕ್ಕಮಗಳೂರು ನಗರದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕೃಯಕರ್ತರು ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.
ಇದರಲ್ಲಿ 30,000 ಸಾವಿರ ಜನರಿಂದ 35,000 ಸಾವಿರ ಜನ ಭಕ್ತಾಧಿಗಳು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸ್ವಾಮೀಜಿಗಳು ಹಾಗೂ ಮಠಾಧೀಶರು ಭಾಗವಹಿಸಲಿದ್ದಾರೆ. ಇನ್ನು ಡಿಸೆಂಬರ್ 14ರಂದು ಬೆಳಿಗ್ಗೆ 4 ಗಂಟೆಗೆ ಭಕ್ತಾಧಿಗಳು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲೂ ಸಾವಿರಾರು ಜನ ಸೇರು ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹಾಗೂ ಪೊಲೀಸ್ ಬಂದೋಬಸ್ತ್ ಮಾಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

ಯಾವ ಭಾಗದಲ್ಲಿ ಮದ್ಯ ಮಾರಾಟ ನಿಷೇಧ: ಚಿಕ್ಕಮಗಳೂರಿನ ಹಲವು ಭಾಗದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಅದರಲ್ಲಿ ಪ್ರಮುಖವಾಗಿ ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಕೊಪ್ಪ, ಎನ್ಆರ್ಪುರ, ತರೀಕೆರೆ ಹಾಗೂ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯಮಾರಾಟ ಇರುವುದಿಲ್ಲ.
ಇನ್ನು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಪ್ರದೇಶದಲ್ಲಿ ಸಂಪೂರ್ಣ ಹಿಂದೂ ಪೀಠದ ಆಗ್ರಹ ಇದೆ. ಇದಕ್ಕೆ ಸಂಬಂಧಿಸಿದಂತೆ ದತ್ತಜಯಂತಿ ವೇಳೆ ಬಿಜೆಪಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಸೇರಿದಂತೆ ಹಲವು ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ ನೆರವೇರಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿ ಮನೆ ಮನೆಗಳಿಗೆ ಹೋಗಿ ಅಕ್ಕಿ, ಕಾಯಿ ಹಾಗೂ ಬೆಲ್ಲವನ್ನು ಸಂಗ್ರಹಿಸಲಾಯಿತು.
ಈ ಪ್ರದೇಶವು ಕೋಮುಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications