ಲೋಡ್ ಶೆಡ್ಡಿಂಗ್ ಇರಲ್ಲ, ಬೆಲೆ ಏರಿಕೆ ನಮ್ಮ ಕೈಲಿಲ್ಲ: ಡಿಕೆಶಿ
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ, ಬೆಲೆ ಏರಿಕೆ ನಮ್ಮ ಕೈಲಿಲ್ಲ, ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಬರಲಿದೆ ಇವಿಷ್ಟು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಪಡಸಾಲೆಯಲ್ಲಿ ಹೇಳಿದ ಮಾತುಗಳಿವು
ಬೆಂಗಳೂರು, ಏಪ್ರಿಲ್ 12: ಲೋಡ್ ಶೆಡ್ಡಿಂಗ್ ಜಾರಿ, ವಿದ್ಯುತ್ ಬೆಲೆ ಏರಿಕೆ, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಫಲಿತಾಂಶದ ಬಗ್ಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದ ಪಡಸಾಲೆಯಲ್ಲಿ ಹೇಳಿದರು.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ. ಆದರೆ ತಾಂತ್ರಿಕ ಕಾರಣಗಳಿಂದ ವಿದ್ಯುತ್ ವ್ಯತ್ಯಯ ಆಗಿರಬಹುದು ಎಂದರು.
ವಿದ್ಯುತ್ ದರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. 2016ರಲ್ಲಿ ಎಸ್ಕಾಂಗಳು ನೀಡಿದ್ದ ಬೇಡಿಕೆಯನ್ನು ಈಗ ಈಡೇರಿಸಲಾಗುತ್ತಿದೆ.
ದರ ಪರಿಷ್ಕರಿಸುವಂತೆ ವಿದ್ಯುತ್ ವಿತರಣಾ ಕಂಪನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದ್ದರೂ, ಬಹುಕಾಲ ಮುಂದೂಡಲಾಗಿತ್ತು. ಈಗ ಅನಿವಾರ್ಯವಾಗಿ ಗ್ರಾಹಕರು ಮತ್ತು ಸರ್ಕಾರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ದರವನ್ನು ಪರಿಷ್ಕರಿಸಲಾಗಿದೆ ಎಂದರು.

ಕೈಗಾರಿಕೆಗಳ ಅನುಕೂಲತೆಗಾಗಿ ಕೆಲವು ವಿನಾಯ್ತಿಗಳನ್ನು ಬೆಸ್ಕಾಂ ವ್ಯಾಪ್ತಿಯಲ್ಲಿ ನೀಡಲಾಗಿದೆ. ವಿದ್ಯುತ್ ಪರಿಷ್ಕರಣೆಗೂ ಮುನ್ನ ಸಾರ್ವಜನಿಕರ ಕುಂದುಕೊರತೆ ಅಹವಾಲಗಳನ್ನು ಆಲಿಸಿ, ಕೆಇಆರ್ಸಿ ಕೈಗೊಂಡಿರುವ ತೀರ್ಮಾನದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.
ಉಪಚುನಾವಣೆಯಲ್ಲಿ ನಮಗೆ ಗೆಲುವು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಸುಲಭ ಜಯ ದಾಖಲಿಸುವ ವಿಶ್ವಾಸವಿದೆ. ಇದಕ್ಕೆ ಯಾವುದೇ ಯಾವುದೇ ಗುಪ್ತಚರ ವರದಿಯ ಅಗತ್ಯವಿಲ್ಲ. ಶ್ರಮವಿದ್ದ ಕಡೆ ಫಲವಿರುತ್ತದೆ. ಈ ಫಲಿತಾಂಶ ಸರ್ಕಾರದ ಸಾಧನೆಯ ಪ್ರತಿಬಿಂಬವಾಗಲಿದೆ ಎಂದು ಹೇಳಿದರು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications