ಲೋಡ್ ಶೆಡ್ಡಿಂಗ್ ಇರಲ್ಲ, ಬೆಲೆ ಏರಿಕೆ ನಮ್ಮ ಕೈಲಿಲ್ಲ: ಡಿಕೆಶಿ
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ, ಬೆಲೆ ಏರಿಕೆ ನಮ್ಮ ಕೈಲಿಲ್ಲ, ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಬರಲಿದೆ ಇವಿಷ್ಟು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಪಡಸಾಲೆಯಲ್ಲಿ ಹೇಳಿದ ಮಾತುಗಳಿವು
ಬೆಂಗಳೂರು, ಏಪ್ರಿಲ್ 12: ಲೋಡ್ ಶೆಡ್ಡಿಂಗ್ ಜಾರಿ, ವಿದ್ಯುತ್ ಬೆಲೆ ಏರಿಕೆ, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಫಲಿತಾಂಶದ ಬಗ್ಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದ ಪಡಸಾಲೆಯಲ್ಲಿ ಹೇಳಿದರು.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ. ಆದರೆ ತಾಂತ್ರಿಕ ಕಾರಣಗಳಿಂದ ವಿದ್ಯುತ್ ವ್ಯತ್ಯಯ ಆಗಿರಬಹುದು ಎಂದರು.
ವಿದ್ಯುತ್ ದರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. 2016ರಲ್ಲಿ ಎಸ್ಕಾಂಗಳು ನೀಡಿದ್ದ ಬೇಡಿಕೆಯನ್ನು ಈಗ ಈಡೇರಿಸಲಾಗುತ್ತಿದೆ.
ದರ ಪರಿಷ್ಕರಿಸುವಂತೆ ವಿದ್ಯುತ್ ವಿತರಣಾ ಕಂಪನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದ್ದರೂ, ಬಹುಕಾಲ ಮುಂದೂಡಲಾಗಿತ್ತು. ಈಗ ಅನಿವಾರ್ಯವಾಗಿ ಗ್ರಾಹಕರು ಮತ್ತು ಸರ್ಕಾರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ದರವನ್ನು ಪರಿಷ್ಕರಿಸಲಾಗಿದೆ ಎಂದರು.

ಕೈಗಾರಿಕೆಗಳ ಅನುಕೂಲತೆಗಾಗಿ ಕೆಲವು ವಿನಾಯ್ತಿಗಳನ್ನು ಬೆಸ್ಕಾಂ ವ್ಯಾಪ್ತಿಯಲ್ಲಿ ನೀಡಲಾಗಿದೆ. ವಿದ್ಯುತ್ ಪರಿಷ್ಕರಣೆಗೂ ಮುನ್ನ ಸಾರ್ವಜನಿಕರ ಕುಂದುಕೊರತೆ ಅಹವಾಲಗಳನ್ನು ಆಲಿಸಿ, ಕೆಇಆರ್ಸಿ ಕೈಗೊಂಡಿರುವ ತೀರ್ಮಾನದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.
ಉಪಚುನಾವಣೆಯಲ್ಲಿ ನಮಗೆ ಗೆಲುವು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಸುಲಭ ಜಯ ದಾಖಲಿಸುವ ವಿಶ್ವಾಸವಿದೆ. ಇದಕ್ಕೆ ಯಾವುದೇ ಯಾವುದೇ ಗುಪ್ತಚರ ವರದಿಯ ಅಗತ್ಯವಿಲ್ಲ. ಶ್ರಮವಿದ್ದ ಕಡೆ ಫಲವಿರುತ್ತದೆ. ಈ ಫಲಿತಾಂಶ ಸರ್ಕಾರದ ಸಾಧನೆಯ ಪ್ರತಿಬಿಂಬವಾಗಲಿದೆ ಎಂದು ಹೇಳಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications