ಅಂತರ ಜಿಲ್ಲಾ ಸಂಚಾರಕ್ಕೆ ಪಾಸ್ ಬೇಡ; ಷರತ್ತುಗಳು ಅನ್ವಯ
ಬೆಂಗಳೂರು, ಮೇ 18 : ಕರ್ನಾಟಕ ಸರ್ಕಾರ ಸೋಮವಾರ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಿದೆ. ಅಂತರ ಜಿಲ್ಲಾ ಸಂಚಾರ ನಡೆಸಲು ಜನರು ಪಾಸುಗಳನ್ನು ಪಡೆಯುವ ಅವಶ್ಯಕತೆ ಇಲ್ಲ. ಆದರೆ, ಸಂಚಾರಕ್ಕೆ ಕೆಲವು ಷರತ್ತುಗಳಿವೆ.
Recommended Video
ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ಅಂತರ್ ಜಿಲ್ಲಾ ಪ್ರಯಾಣ ಮಾಡಿದರೆ ಕ್ವಾರಂಟೈನ್ ಇಲ್ಲ. ಅಂತರ್ ರಾಜ್ಯದಿಂದ ಬಂದರೆ ಮಾತ್ರ ಕ್ವಾರಂಟೈನ್ ಕಡ್ಡಾಯವಾಗಿದೆ" ಎಂದು ಹೇಳಿದರು.
ಸರ್ಕಾರಿ ಬಸ್ಗಳ ಸಂಚಾರಕ್ಕೂ ಸಹ ಕರ್ನಾಟಕ ಸರ್ಕಾರ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಆದರೆ, ಅಂತರರಾಜ್ಯ ಬಸ್ಗಳ ಸಂಚಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿ ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ.

ಕರ್ನಾಟಕಕ್ಕೆ ಕೊರೊನಾ ಹಾಟ್ ಸ್ಪಾಟ್ ಆದ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಯಾರೂ ಸಹ ಮೇ 31ರ ತನಕ ಆಗಮಿಸುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಪಾಸುಗಳು ಬೇಡ: ಅಂತರ ಜಿಲ್ಲಾ ಸಂಚಾರ ನಡೆಸಲು ಇಷ್ಟು ದಿನ ಪಾಸು ಪಡೆಯಬೇಕಿತ್ತು. ಆದರೆ, ಸೋಮವಾರದಿಂದ ಪಾಸುಗಳ ಅಗತ್ಯವಿಲ್ಲ. ಜನರು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯ ತನಕ ಮಾತ್ರ ಸಂಚಾರ ನಡೆಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಖಾಸಗಿ ವಾಹನದಲ್ಲಿ ಸಂಚಾರ ನಡೆಸುವ ಜನರು ಪಾಸು ಪಡೆಯುವ ಅಗತ್ಯವಿಲ್ಲ. ಆದರೆ, ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಕಾರಿನಲ್ಲಿ ಡ್ರೈವರ್ ಹೊರತುಪಡಿಸಿ 3 ಜನರು ಮಾತ್ರ ಸಂಚಾರ ನಡೆಸಬಹುದು. ಮಾಸ್ಕ್ ಬಳಕೆ ಕಡ್ಡಾಯವಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications