Get Updates
Get notified of breaking news, exclusive insights, and must-see stories!

ಅಂತರ ಜಿಲ್ಲಾ ಸಂಚಾರಕ್ಕೆ ಪಾಸ್ ಬೇಡ; ಷರತ್ತುಗಳು ಅನ್ವಯ

ಬೆಂಗಳೂರು, ಮೇ 18 : ಕರ್ನಾಟಕ ಸರ್ಕಾರ ಸೋಮವಾರ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಿದೆ. ಅಂತರ ಜಿಲ್ಲಾ ಸಂಚಾರ ನಡೆಸಲು ಜನರು ಪಾಸುಗಳನ್ನು ಪಡೆಯುವ ಅವಶ್ಯಕತೆ ಇಲ್ಲ. ಆದರೆ, ಸಂಚಾರಕ್ಕೆ ಕೆಲವು ಷರತ್ತುಗಳಿವೆ.

Recommended Video

      ಗೌಡರ ಹೆಸರಲ್ಲಿ ರಕ್ತದಾನ ಮಾಡಿದ ಶರವಣ | TA Sharavana | JDS

      ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ಅಂತರ್‌ ಜಿಲ್ಲಾ ಪ್ರಯಾಣ ಮಾಡಿದರೆ ಕ್ವಾರಂಟೈನ್ ಇಲ್ಲ. ಅಂತರ್ ರಾಜ್ಯದಿಂದ ಬಂದರೆ ಮಾತ್ರ ಕ್ವಾರಂಟೈನ್ ಕಡ್ಡಾಯವಾಗಿದೆ" ಎಂದು ಹೇಳಿದರು.

      ಸರ್ಕಾರಿ ಬಸ್‌ಗಳ ಸಂಚಾರಕ್ಕೂ ಸಹ ಕರ್ನಾಟಕ ಸರ್ಕಾರ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಆದರೆ, ಅಂತರರಾಜ್ಯ ಬಸ್‌ಗಳ ಸಂಚಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿ ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ.

       No Need Of Pass For Inter District Movement In Karnataka

      ಕರ್ನಾಟಕಕ್ಕೆ ಕೊರೊನಾ ಹಾಟ್ ಸ್ಪಾಟ್‌ ಆದ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಯಾರೂ ಸಹ ಮೇ 31ರ ತನಕ ಆಗಮಿಸುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.

      ಪಾಸುಗಳು ಬೇಡ: ಅಂತರ ಜಿಲ್ಲಾ ಸಂಚಾರ ನಡೆಸಲು ಇಷ್ಟು ದಿನ ಪಾಸು ಪಡೆಯಬೇಕಿತ್ತು. ಆದರೆ, ಸೋಮವಾರದಿಂದ ಪಾಸುಗಳ ಅಗತ್ಯವಿಲ್ಲ. ಜನರು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯ ತನಕ ಮಾತ್ರ ಸಂಚಾರ ನಡೆಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

      ಖಾಸಗಿ ವಾಹನದಲ್ಲಿ ಸಂಚಾರ ನಡೆಸುವ ಜನರು ಪಾಸು ಪಡೆಯುವ ಅಗತ್ಯವಿಲ್ಲ. ಆದರೆ, ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಕಾರಿನಲ್ಲಿ ಡ್ರೈವರ್ ಹೊರತುಪಡಿಸಿ 3 ಜನರು ಮಾತ್ರ ಸಂಚಾರ ನಡೆಸಬಹುದು. ಮಾಸ್ಕ್ ಬಳಕೆ ಕಡ್ಡಾಯವಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+