ವಿರೋಧಿಗಳಿಗೆ ಗೌಡ್ರ ಕೇರಂ ಆಟ ಅರ್ಥವೇ ಆಗುವುದಿಲ್ಲ: ವೈ ಎಸ್ ವಿ ದತ್ತ
Recommended Video
ಬೆಂಗಳೂರು, ಜೂನ್ 21: ದೇವೇಗೌಡ್ರು ತಮ್ಮ ರಾಜಕೀಯ ಜೀವನದಲ್ಲಿ ಎಷ್ಟೋ ಚುನಾವಣೆಯನ್ನು ಎದುರಿಸಿದ್ದಾರೆ, ತುಮಕೂರಿನ ಒಂದು ಸೋಲಿನಿಂದ ಅವರನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ, ವಕ್ತಾರ ವೈ ಎಸ್ ವಿ ದತ್ತ ಹೇಳಿದರು.
ನಗರದಲ್ಲಿ ಮಾತನಾಡುತ್ತಿದ್ದ ದತ್ತ, ನಮ್ಮ ನಾಯಕ ದೇವೇಗೌಡರ ಕೇರಂ ಬೋರ್ಡ್ ಆಟ ನಮ್ಮ ಪಕ್ಷದವರಿಗೇ ಗೊತ್ತಾಗುವುದಿಲ್ಲ. ಇನ್ನು ಅವರು ಆಡುವ ಚದುರಂಗದ ಆಟ ಎದುರಾಳಿಗಳಿಗೆ ಅರ್ಥವಾಗುತ್ತದಾ ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆಯೂ ಗೌಡ್ರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ರಾಜಕೀಯದಲ್ಲಿ ಇದೆಲ್ಲಾ ಸಾಮಾನ್ಯ. ಇದಕ್ಕೆಲ್ಲಾ ಗೌಡ್ರು ಧೃತಿಗೆಡುವುದಿಲ್ಲ ಎಂದು ದತ್ತ ಹೇಳಿದರು.

ಗ್ರಾಮ ವಾಸ್ತವ್ಯ ಮತ್ತು ಜನತಾ ದರ್ಶನವನ್ನು ಶುರು ಮಾಡಿದ್ದೇ ಜೆಡಿಎಸ್. ಈಗ, ಇದರ ಬಗ್ಗೆ ವ್ಯಂಗ್ಯವಾಡುತ್ತಿರುವ ಬಿಜೆಪಿಯವರು ಇದನ್ನು ಮೊದಲು ಅರಿತುಕೊಳ್ಳಲಿ ಎಂದು ದತ್ತ, ಬಿಜೆಪಿಗೆ ಎಚ್ಚರಿಕೆಯನ್ನು ನೀಡಿದರು.
ಎಲ್ಲಿ ಕಳೆದುಕೊಳ್ಳುತ್ತೀವೋ ಅಲ್ಲೇ ಗಳಿಸಿಕೊಳ್ಳಬೇಕು ಎನ್ನುವುದು ದೇವೇಗೌಡರ ಹಠ. ಇವರು ಏನಾದರೂ ಹೇಳಿದರೆ, ಅದರ ಹಿಂದೆ ಬೇರೇನೋ ವಿಷಯವಿದೆ ಎಂದು ತಿಳಿದುಕೊಳ್ಳಬೇಕು ಎಂದು ದತ್ತ ಹೇಳಿದರು.
ಜೆಡಿಎಸ್ ಯುವಮೋರ್ಚಾ ಅಧ್ಯಕ್ಷ ಪಟ್ಟವನ್ನು ದೇವೇಗೌಡ ಅವರ ಕುಟುಂಬದ ಹೊರಗಿನವರಿಗೆ ಕೊಡಬೇಕು ಎಂದು ಬಹಿರಂಗವಾಗಿ ದತ್ತ ಎರಡು ದಿನದ ಹಿಂದೆ ಒತ್ತಾಯಿಸಿದ್ದರು.
ದೇವೇಗೌಡ ಅವರ ಮೊಮ್ಮಕ್ಕಳಾದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಸಾಕಷ್ಟು ಪ್ರಜ್ವಲಿಸಿದ್ದಾರೆ, ಅವರು ಇನ್ನು ಮುಂದೆ ತೆರೆ ಮರೆಯಲ್ಲಿ ನಿಂತು ಪಕ್ಷವನ್ನು ಕಟ್ಟಲಿ ಎಂದು ದತ್ತ ಅಸಮಾಧಾನದಿಂದಲೇ ಹೇಳಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications