ಬೆಂಗಳೂರು-ಮೈಸೂರು ಬುಲೆಟ್ ರೈಲು ಭಾಗ್ಯ ಅಸಾಧ್ಯ
ಬೆಂಗಳೂರು, ಫೆ. 11: ಬೆಂಗಳೂರು ಹಾಗೂ ಮೈಸೂರು ನಡುವಿನ ಅಂತರ ಅತ್ಯಂತ ಕಡಿಮೆ. ಆದ್ದರಿಂದ ಈ ಎರಡು ಪ್ರಮುಖ ನಗರಗಳ ನಡುವೆ ಗಂಟೆಗೆ 350 ಕಿ.ಮೀ. ವೇಗದಲ್ಲಿ ಸಾಗಬಲ್ಲ ಬುಲೆಟ್ ರೈಲು ಸಂಚಾರ ಆರಂಭಿಸುವುದು ಸಾಧ್ಯವಿಲ್ಲ ಎಂದು ಡಿಎಂಆರ್ಸಿ (Delhi Metro Rail Corporation) ಸಲಹೆಗಾರ ಶ್ರೀಧರನ್ ತಿಳಿಸಿದ್ದಾರೆ.
ಈ ಕುರಿತು ಶ್ರೀಧರನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರು ನಡುವೆ ಗರಿಷ್ಠ 200 ಕಿ.ಮೀ. ವೇಗದ ರೈಲು ಸಂಚಾರ ಆರಂಭಿಸಬಹುದು ಅಷ್ಟೇ. ಇಲ್ಲಿನ ರೈಲ್ವೆ ಹಳಿ ವಿವಿಧ ಜೋಡಣೆಗಳನ್ನು ಹೊಂದಿರುವುದೂ ಕಾರಣ. ಅಲ್ಲದೆ, ಕೇವಲ 130 ಕಿ.ಮೀ. ಅಂತರ ಇರುವ ಕಾರಣ ಬುಲೆಟ್ ರೈಲಿನ ಪ್ರಯೋಜನ ಸಂಪೂರ್ಣ ಪ್ರಮಾಣದಲ್ಲಿ ಬಳಕೆಯಾಗುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ. [ಕಾಸರಗೋಡು-ಬೈಂದೂರು ನಡುವೆ ರೈಲು]

ಈಗ ಇರುವ ರೈಲ್ವೆ ಹಳಿ ಮೇಲೆ ಬುಲೆಟ್ ರೈಲು ಓಡಿಸುವುದು ಸಾಧ್ಯವಿಲ್ಲ ಎಂದು ಚೀನಾ ತಂತ್ರಜ್ಞರ ತಂಡ ರೈಲ್ವೆ ಇಲಾಖೆಗೆ ವರದಿ ಸಲ್ಲಿಸಿದ ನಂತರ ಶ್ರೀಧರನ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. [ವೈಷ್ಣೋದೇವಿ ದೇಗುಲಕ್ಕೆ ರೈಲು]
"ಅಲ್ಲದೆ, ಗಂಟೆಗೆ 200 ಕಿ.ಮೀ. ವೇಗದಲ್ಲಿ ಸಾಗಬಲ್ಲ ರೈಲು ಸಂಚಾರಕ್ಕಾಗಿ ಸೌಲಭ್ಯ ನಿರ್ಮಿಸಲು ಕಿ.ಮೀ.ಗೆ 90 ರಿಂದ 100 ಕೋಟಿ ರು. ಖರ್ಚು ಬೀಳುತ್ತದೆ. ಯೋಜನೆಗೆ ಒಟ್ಟು 11,000 ಕೋಟಿ ರು. ವೆಚ್ಚವಾಗಲಿದ್ದು, ಕಾಮಗಾರಿ ಮುಗಿಸಲು ಐದು ವರ್ಷ ಬೇಕಾಗುತ್ತದೆ." [ರೈಲ್ವೆ ಯೋಜನೆಯಿಂದ ರಾಜ್ಯಕ್ಕೆ ಹೊರೆ]
"ವೆಚ್ಚದ ಶೇ. 40ರಷ್ಟು ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಜಂಟಿಯಾಗಿ ಭರಿಸಬೇಕಾಗುತ್ತದೆ. ಉಳಿದ ಶೇ. 60ರಷ್ಟು ಮೊತ್ತವನ್ನು ಮಾರುಕಟ್ಟೆಯಿಂದಲೇ ಪಡೆಯಬೇಕಾಗುತ್ತದೆ. ಇದಕ್ಕಾಗಿ ವಿವರವಾದ ಪ್ರಾಜೆಕ್ಟ್ ವರದಿ ತಯಾರಿಸಲು 8 ರಿಂದ 9 ತಿಂಗಳು ಅಗತ್ಯ" ಎಂದು ಶ್ರೀಧರನ್ ಅವರು ಪತ್ರದಲ್ಲಿ ಕರ್ನಾಟಕ ಸರ್ಕಾರಕ್ಕೆ ವಿವರಣೆ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications