ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಆಗುವುದಿಲ್ಲ: ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟನೆ
ಬೆಂಗಳೂರು.ಫೆ.24; ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರೆ. ಅಲ್ಲದೆ, ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು. ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಗಿದೆ. ಇದಕ್ಕೆ ಅವರು ಬಜೆಟ್ ನಲ್ಲಿ ಅಥವಾ ಆ ನಂತರ ಸೂಕ್ತ ವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.
ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ
2022-23 ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೇ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು.

ಇಲಾಖೆ ಬಗ್ಗೆ ಸಹಾನೂಭೂತಿ ಇದೆ. ಹಾಗೇಯೆ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಜೆಟ್ನಲ್ಲಿ ಇಲಾಖೆಗೆ ಹೊಸ ಸ್ವೂರಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದಲ್ಲದೆ, ಕಾನೂನುಗಳನ್ನು ಬದಲಾಯಿಸುವ ಸಂಬಂಧವೂ ಗಮನಹರಿಸಲಾಗುವುದು ಎಂದರು.
ನಕಲಿ ಮಧ್ಯಕ್ಕೆ ತಡೆ
ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಹೊರ ರಾಜ್ಯದಲ್ಲಿ ಆಗಮಿಸುವ ನಕಲಿ ಮದ್ಯ ತಡೆಗೆ ಸರ್ಕಾರ ಉಗ್ರ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಇದ್ದರೂ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡುವಂತೆ ಇಲಾಖಾ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.
ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ.ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications