ಸಿಡಿ ಪ್ರಕರಣ; ಮೂರು ಫ್ಯಾಮಿಲಿಗೂ ಡ್ಯಾಮೇಜ್ ಆಗುತ್ತೆ ಇಷ್ಟಕ್ಕೆ ನಿಲ್ಲಿಸಿ: ಬಾಲಚಂದ್ರ ಜಾರಕಿಹೊಳಿ
ಎಲ್ಲಾ ದೊಡ್ಡ ದೊಡ್ಡ ಫ್ಯಾಮಿಲಿ ಇವೆ ದಯಮಾಡಿ ಈ ಕೇಸ್ ಮುಂದುವರೆಸಬೇಡಿ. ನಾವು ರಾಜಕೀಯವಾಗಿ ಹೋರಾಟ ಮಾಡೋಣ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ,ಜನವರಿ31: ಈ ರೀತಿ ಸಿಡಿ ಪ್ರಕರಣ ಇಟ್ಟುಕೊಂಡು ಹೋದರೇ ಮೂರು ಫ್ಯಾಮಿಲಿಗಳಿಗೆ ಡ್ಯಾಮೇಜ್ ಆಗುತ್ತೆ. ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಿಚಾರವನ್ನ ಇಲ್ಲಿಗೆ ಬಿಡಿ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಈ ಕುರಿತು ಮಂಗಳವಾರ ಗೋಕಾಕ್ ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೂರು ತಿಂಗಳಲ್ಲಿ ಚುನಾವಣೆ ಇದೆ. ಈ ರೀತಿ ಸಿಡಿ ಪ್ರಕರಣ ಇಟ್ಟುಕೊಂಡು ಈ ರೀತಿ ಹೋದ್ರೇ ಮೂರು ಫ್ಯಾಮಿಲಿಗಳಿಗೆ ಡ್ಯಾಮೇಜ್ ಆಗುತ್ತೆ. ಎಲ್ಲಾ ದೊಡ್ಡ ದೊಡ್ಡ ಫ್ಯಾಮಿಲಿ ಇವೆ ದಯಮಾಡಿ ಈ ಕೇಸ್ ಮುಂದುವರೆಸಬೇಡಿ. ನಾವು ರಾಜಕೀಯವಾಗಿ ಹೋರಾಟ ಮಾಡೋಣ. ಬಿಜೆಪಿಯಿಂದ ನಾವು ಕಾಂಗ್ರೆಸ್ ನಿಂದ ನೀವು ರಾಜಕೀಯವಾಗಿ ಹೋರಾಟ ಮಾಡೋಣ. ಜನ ಯಾರ ಮೇಲೆ ಪ್ರೀತಿ ಇದಾರೆ ಅವರಿಗೆ ವೋಟ್ ಹಾಕ್ತಾರೆ. ದಯಮಾಡಿ ಸಿಡಿ ಪ್ರಕರಣ ಕೇಸರೆರಚಾಟ ಮಾಡಬೇಡಿ ಎಂದು ಮನವಿ ಮಾಡಿದರು.
ಕೆಲವು ವಿಚಾರವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವರ ಜೊತೆಗೆ ಒಂದು ರೂಮ್ ನಲ್ಲಿ ಕುಳಿತು ಚರ್ಚೆ ಮಾತನಾಡುತ್ತೇವೆ. ಇದನ್ನ ಸಾರ್ವಜನಿಕವಾಗಿ ಟೀಕೆ ಮಾಡುವುದನ್ನ ಮೂರು ಜನ ನಿಲ್ಲಿಸಬೇಕು. ಪಕ್ಷದಲ್ಲಿ ಈ ವಿಚಾರ ಕರೆದ ಕೇಳಿದರೇ ವರಿಷ್ಠರ ಮುಂದೆ ಹೇಳುತ್ತೇವೆ. ಮೂರು ಜನ ದಯಮಾಡಿ ಇದನ್ನ ಮುಂದುವರೆಸಬೇಡಿ. ಎಲ್ಲರೂ ದೊಡ್ಡ ಮಟ್ಟಕ್ಕೆ ಬೆಳೆದಿದ್ದೀರಿ ಇನ್ನೂ ಒಳ್ಳೆ ಮಟ್ಟಕ್ಕೆ ಬೆಳೆಯಿರಿ ಎಂದು ಹೇಳಿದರು.

ಪಕ್ಷವಾರು ಹೋರಾಟ ಮಾಡೋಣ ನಮ್ಮನ್ನ ಸೋಲಿಸಲು ಅವರು ಬರಲಿ, ಅವರನ್ನ ಸೋಲಿಸಲು ನಾವು ಹೋಗೋಣ. ಇದನ್ನ ಬಿಟ್ಟು ಯಾರ ವೈಯಕ್ತಿಕ ಟೀಕೆ ಬಿಟ್ಟು ರಾಜಕೀಯ ಮಾಡಿ. ಸಿಡಿ ಬಿಡುಗಡೆಯಾದಾಗ ಖಂಡಿತ ಅವರಿಗೆ ನೋವಾಗಿದೆ. ಈ ಸಂದರ್ಭದಲ್ಲಿ ನಾವು ಅವರೊಟ್ಟಿಗೆ ಇದ್ದು ಹೋರಾಟ ಮಾಡಿದ್ದೇವೆ. ರಾಜಕೀಯ ಬೆಳೆಸೋದು ಹಾಳು ಮಾಡುವುದು ಕ್ಷೇತ್ರದ ಜನರ ಕೈಯಲ್ಲಿ ಇರುತ್ತೆ. ರಮೇಶ್ ಜಾರಕಿಹೊಳಿಗೆ ಅನ್ಯಾಯ ಆಗಿದೆ ತೊಂದರೆ ಆಗಿದೆ. ಎನೇ ಆದ್ರೂ ಸಾರ್ವಜನಿಕವಾಗಿ ಮಾತಾಡದೇ. ಪಕ್ಷದ ವೇದಿಕೆಯಲ್ಲಿ ಕುಳಿತು ಮಾತಾಡಿ ನಿರ್ಣಯ ತೆಗೆದುಕೊಳ್ಳುವುದು ಒಳ್ಳೆಯದು. ನಾನು ಸಿಡಿ ಬಿಡುಗಡೆ ಆದಾಗ ಸಿಬಿಐಗೆ ನೀಡುವಂತೆ ಮನವಿ ಮಾಡಿದ್ದೆ. ಆಗ ಯಾರು ಕೇಳಲಿಲ್ಲ, ಈಗ ಸಾರ್ವಜನಿಕ ಚರ್ಚೆ ಮಾಡಿ ಪ್ರಯೋಜನ ಇಲ್ಲಾ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications