ಕೆಎಸ್ ಆರ್ ಟಿಸಿ ಬಸ್ ದರ ಇಳಿಕೆ, ಬರೀ ಪೊಳ್ಳು ಭರವಸೆ
ಬೆಂಗಳೂರು, ಜ. 1: ರಾಜ್ಯದ ಜನರ ನಿರೀಕ್ಷೆಯನ್ನು ಕಾಂಗ್ರೆಸ್ ಸರ್ಕಾರ ಹುಸಿಮಾಡಿದೆ. ನಿರಂತರವಾಗಿ ಡೀಸೆಲ್ ದರ ಇಳಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ದರ ಕಡಿಮೆಯಾಗಲಿದೆ ಎಂಬ ಆಸೆಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ.
ಸಾರ್ವಜನಿಕ ಸಾರಿಗೆ(ಕೆಎಸ್ ಆರ್ ಟಿಸಿ) ದರ ಕಡಿಮೆ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಈ ಪ್ರಸ್ತಾವನೆಯನ್ನು ಗುರುವಾರ ಸಿಎಂ ತಿರಸ್ಕರಿಸುವ ಮೂಲಕ ಸಾರಿಗೆ ದರ ಸದ್ಯಕ್ಕೆ ಕಡಿಮೆಯಾಗಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.[ಬಸ್ ದರ ಇಳಿಕೆ ಸುಳಿವು ನೀಡಿದ ಸಚಿವ]

ಈ ಮೊದಲು ಮಾಧ್ಯಮದವರ ಬಳಿ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು, ಹೊಸ ವರ್ಷಕ್ಕೆ ಶುಭ ಸುದ್ದಿ ನೀಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಮಾತಿಗೆ ತಪ್ಪಿದ್ದಾರೆ. ಒಟ್ಟು ನಾಲ್ಕು ಸಾರಿ ಡೀಸೆಲ್ ದರ ಕಡಿಮೆಯಾಗಿದ್ದರೂ ರಾಜ್ಯದ ಜನರಿಗೆ ಇಳಿಕೆ ಭಾಗ್ಯ ಸಿಕ್ಕಿಲ್ಲ.
ಬೆಳಗಾವಿ ಅಧಿವೇಶನದ ವೇಳೆ ಬಸ್ ದರ ಕಡಿಮೆ ಮಾಡುತ್ತೇನೆ ಎಂದು ಹೇಳಿದ್ದ ರಾಜ್ಯ ಸರ್ಕಾರ ಜನವರಿ 1 ರ ಗಡುವು ನೀಡಿತ್ತು. ತೈಲ ಬೆಲೆಯಲ್ಲಿ ಇಳಿಕೆಯಾದ ಸಂದರ್ಭ ರಾಜ್ಯದ ಹಲವೆಡೆ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.[ಪ್ರಯಾಣದರ ಎಷ್ಟು ಕಡಿಮೆಯಾಗಲಿದೆ?]
ಬೆಳಗಾವಿ ಅಧಿವೇಶನದ ಸಂದರ್ಭ ಜನರ ಮತ್ತು ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತೆ ಎಂಬ ಪ್ರಶ್ನೆಗೆ ಉತ್ತರ ನೀಡುವವರು ಯಾರೂ ಇಲ್ಲ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications