ಕರ್ನಾಟಕ ಬಂದ್; ಮಹಿಷಿ ವರದಿ ಜಾರಿ ಬಗ್ಗೆ ಯಡಿಯೂರಪ್ಪ ಏನಂದ್ರು?
ಬೆಂಗಳೂರು, ಫೆಬ್ರವರಿ 13: ಮಹಿಷಿ ವರದಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಬಂದ್ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಯಾವುದೇ ಸಂಘಟನೆಯಿಲ್ಲದೇ ತರಾತುರಿಯಲ್ಲಿ ಬಂದ್ಗೆ ಕರೆ ನೀಡಿದ್ದ ಸಂಘಟನೆಗಳಿಗೆ ಮುಖಭಂಗವಾದಂತಾಗಿದೆ. ಬೆಂಗಳೂರಿನಲ್ಲಿ ಗುರುವಾರ ಬೆಳಿಗ್ಗೆ ಸ್ವಲ್ಪ ಮಟ್ಟಿಗೆ ಜನಸಂಚಾರ ವಿರಳ ಎನ್ನುವುದನ್ನು ಬಿಟ್ಟರೇ ಎಲ್ಲವೂ ಎಂದಿನಂತೆ ಜನಜೀವನ ಕಂಡು ಬಂತು. ಬಂದ್ ನಡೆಸುತ್ತೇವೆ ಎಂದು ಹೇಳಿದ್ದ ಆಟೋ, ಓಲಾ ಊಬರ್ ಚಾಲಕರೂ ಕೂಡ ಬಂದ್ ನಡೆಸಲು ಉತ್ಸುಕತೆ ತೋರಿಸಲಿಲ್ಲ. ಸಾರಿಗೆ, ಹೋಟೆಲ್, ಅಂಗಡಿ, ಮುಂಗಟ್ಟುಗಳು, ಆಸ್ಪತ್ರೆ ಎಂದಿನಂತೆ ನಡೆದವು.
ಕೆಲ ಸಂಘಟನೆಗಳು ಸಿಟಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸರೋಜಿನಿ ಮಹಿಷಿ ವರದಿ ಜಾರಿಯಾಗಲೇಬೇಕು ಎಂದು ಒತ್ತಾಯಿಸಿದರು.

ಭರವಸೆ ನೀಡಿದ ಸಿಎಂ ಯಡಿಯೂರಪ್ಪ
ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ಚರ್ಚೆ ಮಾಡಿ, ಒಂದು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇತಿಮಿತಿಯಲ್ಲಿ ಏನೇನು ಬದಲಾವಣೆ ತರಬೇಕು ಅಂತ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಏನೇನು ಜಾರಿಗೆ ತರಬೇಕು ಅಂತ ವಿಪಕ್ಷಗಳ ಜೊತೆಗೂ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್
ಟ್ವಿಟ್ಟರ್ನಲ್ಲಿ ಕರ್ನಾಟಕ ಬಂದ್ ಟ್ರೆಂಡಿಂಗ್ನಲ್ಲಿದೆ. #KarnatakaBandh ಬಳಸಿ, ಜನ ಟ್ವೀಟ್ ಮಾಡುತ್ತಿದ್ದಾರೆ. ಬಹಳಷ್ಟು ಜನ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದ್ದಾರೆ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಮ್ಮ ಸರ್ಕಾರ ಬದ್ದವಿದೆ
ಕನ್ನಡಿಗರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಬದ್ದವಿದ್ದು, ಕನ್ನಡ ಸಂಘಟನೆಗಳು ಬಂದ್ ನಡೆಸದೇ ಸರ್ಕಾರದ ಜೊತೆ ಮಾತುಕತೆ ನಡೆಸಲಿ, ಅವರ ಬೇಡಿಕೆಗಳನ್ನು ತಿಳಿಸಲಿ. ಈ ಕುರಿತು ಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗದಗನಲ್ಲಿ ಹೇಳಿದ್ದಾರೆ.

ಹೋರಾಟಗಾರರಲ್ಲಿ ಒಡಕು
ಗುರುವಾರದ ಕರ್ನಾಟಕ ಬಂದ್ ಜನರಲ್ಲಿ ಅತಿ ಹೆಚ್ಚು ಗೊಂದಲಗಳನ್ನು ಹುಟ್ಟಿ ಹಾಕಿತ್ತು. ಇದಕ್ಕೆ ಕಾರಣ ಸಂಘಟನೆಗಳಲ್ಲಿಯೇ ಬಂದ್ ಬಗ್ಗೆ ಬಿರುಕು ಮೂಡಿತ್ತು. ಕೆಲವರು ಬಂದ್ ಮಾಡುತ್ತೇವೆ ಎಂದರೆ, ಇನ್ನೂ ಕೆಲ ಹೋರಾಟಗಾರರು ಬಂದ್ ಮಾಡಬೇಡಿ ಎಂದು ಕೇಳಿಕೊಳ್ಳುತ್ತಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications