Get Updates
Get notified of breaking news, exclusive insights, and must-see stories!

'ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಮಸ್ಯೆ, ಕೈತಪ್ಪಿದ ಸಾವಿರಾರು ಕೋಟಿ ಆದಾಯ'

ಬೆಂಗಳೂರು, ಫೆಬ್ರವರಿ 06: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ 28 ದಿನಗಳಿಂದ ಯಾವ ಸಾಫ್ಟ್‍ವೇರ್ ಕೂಡ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ ಇಂದು(ಗುರುವಾರ) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇ ಖಾತೆ ಇಲ್ಲದೆ ನೋಂದಣಿ ಇಲ್ಲ ಎಂಬ ಹೊಸ ಷರತ್ತನ್ನು ಜಾರಿ ಮಾಡಿದ್ದಾರೆ. ಪೂರ್ವಾಪರ ಯೋಚಿಸದೆ ಹೀಗೆ ಮಾಡಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 1 ಲಕ್ಷ 70 ಸಾವಿರ ಬಿಡಿಎ ನಿವೇಶನಗಳಿವೆ. ಹೌಸಿಂಗ್ ಸೊಸೈಟಿಯ 60 ಸಾವಿರ ನಿವೇಶನಗಳಿವೆ. 30ರಿಂದ 35 ಸಾವಿರ ಬಿಡಿಎ ಅಪ್ರೂವ್ಡ್ ಸೈಟ್‍ಗಳಿವೆ. ಉಳಿದ 17 ಲಕ್ಷ ಪ್ರಾಪರ್ಟಿಗಳನ್ನು ಕಾನೂನುಬಾಹಿರ ಎಂದಿದ್ದಾರೆ. ಇದೆಲ್ಲರ ಪರಿಣಾಮ ಕಳೆದ 3 ತಿಂಗಳಿನಿಂದ ಸುಮಾರು ನಾಲ್ಕೈದು ಸಾವಿರ ಕೋಟಿ ಆದಾಯ ಸರಕಾರದ ಕೈತಪ್ಪಿ ಹೋಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದರು.

No Software Has Been Working In Sub-Registrar s Offices For 28 Days Ashwath Narayan

ಸಚಿವ ಕೃಷ್ಣಬೈರೇಗೌಡರು ಇದರ ಕಡೆ ಗಮನ ಕೊಡುತ್ತಿಲ್ಲ; ಬಿಬಿಎಂಪಿಯ ತುಷಾರ್ ಗಿರಿನಾಥ್, ಮನೀಷ್ ಮುದ್ಗಲ್ ಅವರು ತಮ್ಮದೇ ಆದ ರೀತಿಯಲ್ಲಿ ಐಡಿಯ ಕೊಡುತ್ತಿದ್ದು, ಕೃಷ್ಣಬೈರೇಗೌಡರು ತುತ್ತೂರಿ ಊದುತ್ತಿದ್ದು ಕೆಲಸ ಆಗುತ್ತಿಲ್ಲ; ಮಂಜೂರಾದ ವೈದ್ಯಕೀಯ ಸೀಟಿಗೆ ಹಣ ಕಟ್ಟಲು ಆಸ್ತಿ ಮಾರಾಟ ಮಾಡಲು ಆಗುತ್ತಿಲ್ಲ ಎಂದು ದೂರಿದರು. ಎನ್‍ಕಂಬರೆನ್ಸ್, ಸರ್ಟಿಫೈಡ್ ಕಾಪಿ ಸಿಗುತ್ತಿಲ್ಲ. ಎನ್‍ಕಂಬರೆನ್ಸ್ ಕೇಳಿದರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರ್ವರ್ ಡೌನ್ ಎನ್ನುತ್ತಾರೆ ಎಂದು ಟೀಕಿಸಿದರು. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಟಿಪಿ ಬಾರದೆ ನೋಂದಣಿ ಕಾರ್ಯ ನಡೆಯುತ್ತಿಲ್ಲ.

ಕಾವೇರಿ 2 ಆ್ಯಪ್ ಬಂದ ಬಳಿಕ ಒಂದು ದಿನದ ಮುಂದೆ ಹಣ ಕಟ್ಟಬೇಕಾಗಿದೆ. ನಿಗದಿತ ಅವಧಿಯಲ್ಲಿ ಹೋದರೆ ಸಾಫ್ಟ್‍ವೇರ್ ಕೆಲಸ ಮಾಡದೆ ಸರ್ವರ್ ಡೌನ್ ಎಂಬ ಉತ್ತರ ಸಿಗುತ್ತದೆ. ನೋಂದಣಿ ನಡೆಯದೆ ಗೊಂದಲ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಳೆದ ಎರಡು ತಿಂಗಳುಗಳಿಂದ ಇ ಖಾತಾ ಹೆಸರಿನಲ್ಲಿ ಉಪ ನೋಂದಣಿ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಕೆಲಸ ಸ್ಥಗಿತವಾಗಿದ್ದು, ಸಾಮಾನ್ಯ ಜನರು, ಬಡವರು ಕಷ್ಟಕಾಲದಲ್ಲಿ ಆಸ್ತಿ ಮಾರಾಟ ಮಾಡಲು ಅಥವಾ ಕೊಳ್ಳಲಾಗದ, ಬ್ಯಾಂಕಿನಲ್ಲಿ ಅಡಮಾನ ಮಾಡಿ ಸಾಲ ಪಡೆಯಲು, ಕೈಸಾಲಕ್ಕೆ ತೊಂದರೆ ಆಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಕಂದಾಯ ಸಚಿವ ಕೃಷ್ಣಬೈರೇಗೌಡರು ಇಲಾಖೆ ಕೆಲಸ ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ಮೂಗು ತೂರಿಸುವ ಕೆಲಸ ಮಾಡುತ್ತಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2 ಸಾಫ್ಟ್‍ವೇರ್ ಹೆಸರಿನಲ್ಲಿ ಒಂದೊಂದು ಕೆಲಸಕ್ಕೆ ಒಂದೊಂದು ಸಾಫ್ಟ್‍ವೇರ್ ಅಭಿವೃದ್ಧಿ ಪಡಿಸಿದ್ದಾರೆ. ನೋಂದಣಿ ಕಾರ್ಯಕ್ಕೆ ಒಂದು ಸಾಫ್ಟ್‍ವೇರ್, ಎನ್‍ಕಂಬರೆನ್ಸ್‍ಗೆ ಒಂದು ಸಾಫ್ಟ್‍ವೇರ್, ದೃಢೀಕೃತ ಕಾಪಿ ಪಡೆಯಲು ಒಂದು ಸಾಫ್ಟ್‍ವೇರ್, ನಾಗರಿಕರು ಮನೆಯಿಂದ ಕಡತಗಳನ್ನು ಅಪ್‍ಲೋಡ್ ಮಾಡಲು ಮತ್ತೊಂದು ಸಾಫ್ಟ್‍ವೇರ್ ಅಭಿವೃದ್ಧಿಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+