'ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಮಸ್ಯೆ, ಕೈತಪ್ಪಿದ ಸಾವಿರಾರು ಕೋಟಿ ಆದಾಯ'
ಬೆಂಗಳೂರು, ಫೆಬ್ರವರಿ 06: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ 28 ದಿನಗಳಿಂದ ಯಾವ ಸಾಫ್ಟ್ವೇರ್ ಕೂಡ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ ಇಂದು(ಗುರುವಾರ) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇ ಖಾತೆ ಇಲ್ಲದೆ ನೋಂದಣಿ ಇಲ್ಲ ಎಂಬ ಹೊಸ ಷರತ್ತನ್ನು ಜಾರಿ ಮಾಡಿದ್ದಾರೆ. ಪೂರ್ವಾಪರ ಯೋಚಿಸದೆ ಹೀಗೆ ಮಾಡಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 1 ಲಕ್ಷ 70 ಸಾವಿರ ಬಿಡಿಎ ನಿವೇಶನಗಳಿವೆ. ಹೌಸಿಂಗ್ ಸೊಸೈಟಿಯ 60 ಸಾವಿರ ನಿವೇಶನಗಳಿವೆ. 30ರಿಂದ 35 ಸಾವಿರ ಬಿಡಿಎ ಅಪ್ರೂವ್ಡ್ ಸೈಟ್ಗಳಿವೆ. ಉಳಿದ 17 ಲಕ್ಷ ಪ್ರಾಪರ್ಟಿಗಳನ್ನು ಕಾನೂನುಬಾಹಿರ ಎಂದಿದ್ದಾರೆ. ಇದೆಲ್ಲರ ಪರಿಣಾಮ ಕಳೆದ 3 ತಿಂಗಳಿನಿಂದ ಸುಮಾರು ನಾಲ್ಕೈದು ಸಾವಿರ ಕೋಟಿ ಆದಾಯ ಸರಕಾರದ ಕೈತಪ್ಪಿ ಹೋಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದರು.

ಸಚಿವ ಕೃಷ್ಣಬೈರೇಗೌಡರು ಇದರ ಕಡೆ ಗಮನ ಕೊಡುತ್ತಿಲ್ಲ; ಬಿಬಿಎಂಪಿಯ ತುಷಾರ್ ಗಿರಿನಾಥ್, ಮನೀಷ್ ಮುದ್ಗಲ್ ಅವರು ತಮ್ಮದೇ ಆದ ರೀತಿಯಲ್ಲಿ ಐಡಿಯ ಕೊಡುತ್ತಿದ್ದು, ಕೃಷ್ಣಬೈರೇಗೌಡರು ತುತ್ತೂರಿ ಊದುತ್ತಿದ್ದು ಕೆಲಸ ಆಗುತ್ತಿಲ್ಲ; ಮಂಜೂರಾದ ವೈದ್ಯಕೀಯ ಸೀಟಿಗೆ ಹಣ ಕಟ್ಟಲು ಆಸ್ತಿ ಮಾರಾಟ ಮಾಡಲು ಆಗುತ್ತಿಲ್ಲ ಎಂದು ದೂರಿದರು. ಎನ್ಕಂಬರೆನ್ಸ್, ಸರ್ಟಿಫೈಡ್ ಕಾಪಿ ಸಿಗುತ್ತಿಲ್ಲ. ಎನ್ಕಂಬರೆನ್ಸ್ ಕೇಳಿದರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರ್ವರ್ ಡೌನ್ ಎನ್ನುತ್ತಾರೆ ಎಂದು ಟೀಕಿಸಿದರು. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಟಿಪಿ ಬಾರದೆ ನೋಂದಣಿ ಕಾರ್ಯ ನಡೆಯುತ್ತಿಲ್ಲ.
ಕಾವೇರಿ 2 ಆ್ಯಪ್ ಬಂದ ಬಳಿಕ ಒಂದು ದಿನದ ಮುಂದೆ ಹಣ ಕಟ್ಟಬೇಕಾಗಿದೆ. ನಿಗದಿತ ಅವಧಿಯಲ್ಲಿ ಹೋದರೆ ಸಾಫ್ಟ್ವೇರ್ ಕೆಲಸ ಮಾಡದೆ ಸರ್ವರ್ ಡೌನ್ ಎಂಬ ಉತ್ತರ ಸಿಗುತ್ತದೆ. ನೋಂದಣಿ ನಡೆಯದೆ ಗೊಂದಲ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಳೆದ ಎರಡು ತಿಂಗಳುಗಳಿಂದ ಇ ಖಾತಾ ಹೆಸರಿನಲ್ಲಿ ಉಪ ನೋಂದಣಿ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಕೆಲಸ ಸ್ಥಗಿತವಾಗಿದ್ದು, ಸಾಮಾನ್ಯ ಜನರು, ಬಡವರು ಕಷ್ಟಕಾಲದಲ್ಲಿ ಆಸ್ತಿ ಮಾರಾಟ ಮಾಡಲು ಅಥವಾ ಕೊಳ್ಳಲಾಗದ, ಬ್ಯಾಂಕಿನಲ್ಲಿ ಅಡಮಾನ ಮಾಡಿ ಸಾಲ ಪಡೆಯಲು, ಕೈಸಾಲಕ್ಕೆ ತೊಂದರೆ ಆಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ಕಂದಾಯ ಸಚಿವ ಕೃಷ್ಣಬೈರೇಗೌಡರು ಇಲಾಖೆ ಕೆಲಸ ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ಮೂಗು ತೂರಿಸುವ ಕೆಲಸ ಮಾಡುತ್ತಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2 ಸಾಫ್ಟ್ವೇರ್ ಹೆಸರಿನಲ್ಲಿ ಒಂದೊಂದು ಕೆಲಸಕ್ಕೆ ಒಂದೊಂದು ಸಾಫ್ಟ್ವೇರ್ ಅಭಿವೃದ್ಧಿ ಪಡಿಸಿದ್ದಾರೆ. ನೋಂದಣಿ ಕಾರ್ಯಕ್ಕೆ ಒಂದು ಸಾಫ್ಟ್ವೇರ್, ಎನ್ಕಂಬರೆನ್ಸ್ಗೆ ಒಂದು ಸಾಫ್ಟ್ವೇರ್, ದೃಢೀಕೃತ ಕಾಪಿ ಪಡೆಯಲು ಒಂದು ಸಾಫ್ಟ್ವೇರ್, ನಾಗರಿಕರು ಮನೆಯಿಂದ ಕಡತಗಳನ್ನು ಅಪ್ಲೋಡ್ ಮಾಡಲು ಮತ್ತೊಂದು ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ವಿವರಿಸಿದರು.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications