Get Updates
Get notified of breaking news, exclusive insights, and must-see stories!

ಕರ್ಫ್ಯೂ ಕ್ಯಾನ್ಸಲ್: ಭಾನುವಾರ ಸಂಚಾರ ನಡೆಸಲಿವೆ 3500 KSRTC ಬಸ್ ಗಳು

ಬೆಂಗಳೂರು, ಮೇ 30: ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸಂಡೇ ಕರ್ಫ್ಯೂವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಹೀಗಾಗಿ, ಮೇ 31 ಭಾನುವಾರ ಕರ್ನಾಟಕದಲ್ಲಿ ಕರ್ಫ್ಯೂ ಇರುವುದಿಲ್ಲ. ದೈನಂದಿನ ಚಟುವಟಿಕೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.

ರಾಜ್ಯ ಸರ್ಕಾರ ಕರ್ಫ್ಯೂ ಕೈಬಿಟ್ಟ ಕಾರಣ, ಭಾನುವಾರ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಕೂಡ ಸಂಚಾರ ನಡೆಸಲಿವೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಎಂದಿನಂತೆ ಮುಂದುವರೆಯಲಿದೆ. ಮೇ 31 ರಂದು ಒಟ್ಟು 3500 ಕೆ.ಎಸ್.ಆರ್.ಟಿ.ಸಿ ಬಸ್ ಗಳು ಓಡಾಡಲಿವೆ.

No Sunday Curfew in Karnataka: KSRTC to operate with 3500 buses on May 31st

ಮುಂಗಡ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಅಥವಾ ಇತರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರು ಟಿಕೆಟ್ ಬುಕ್ ಮಾಡಬಹುದಾಗಿದೆ.

ಮೇ 19 ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಪುನರಾರಂಭಗೊಂಡಿದ್ದು, ಇಲ್ಲಿಯವರೆಗೂ ಒಟ್ಟು 8,71,625 ಜನರು ಪ್ರಯಾಣ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ಇತರೆ ಜಿಲ್ಲೆಗಳಿಗೆ ಒಟ್ಟು 1,20,202 ಜನರು ಪ್ರಯಾಣಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+