ಸಚಿವ ಉಮೇಶ್ ಕತ್ತಿಯಿಂದ ಕರ್ನಾಟಕ ಇಬ್ಭಾಗದ ಹೇಳಿಕೆ: ಸಾಫ್ಟ್ ಉತ್ತರ ಕೊಟ್ಟ ಸಿಎಂ
ನವದೆಹಲಿ, ಜೂನ್ 23: ಮುಂಬರುವ ಲೋಕಸಭಾ ಚುನಾವಣೆಯ ನಂತರ ಕರ್ನಾಟಕ ಇಬ್ಭಾಗವಾಗಿ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಫ್ಟ್ ಉತ್ತರ ನೀಡಿದ್ದಾರೆ.
'ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು.
ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ:
ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ. ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ
ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ಇಲ್ಲಿಗೆ ಬಂದಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
'ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ' ಎಂದರು.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications