ರಕ್ಷಿತಾ ಕೈ ತಪ್ಪಿತು ಮಂಡ್ಯ ಕ್ಷೇತ್ರದ ಟಿಕೆಟ್!
ಬಿಜಾಪುರ, ಫೆ.12 : ಮಂಡ್ಯಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ನಟಿ ರಕ್ಷಿತಾ ಅವರಿಗೆ ಹಿನ್ನಡೆ ಉಂಟಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುತ್ತದೆ. ರಕ್ಷಿತಾ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬಿಜಾಪುರದಲ್ಲಿ ಮಂಗಳವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಸಂಸದೆ ರಮ್ಯಾ ವಿರುದ್ಧ ಸ್ಪರ್ಧಿಸಲು ರಕ್ಷಿತಾ ಅವರಿಗೆ ಜೆಡಿಎಸ್ ಟಿಕೆಟ್ ನೀಡುತ್ತದೆ ಎಂಬ ಮಾತನ್ನು ತಳ್ಳಿಹಾಕಿದರು. ರಕ್ಷಿತಾ ಅವರಿಗೆ ಟಿಕೆಟ್ ನೀಡುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ರಕ್ಷಿತಾ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಓರ್ವ ಚಿತ್ರನಟಿಯನ್ನು ಸೋಲಿಸಲು ಪಕ್ಷಕ್ಕೆ ದುಡಿಯದ ಇನ್ನೋರ್ವ ಚಿತ್ರನಟಿಯನ್ನು ಕಣಕ್ಕೆ ಇಳಿಸುವಷ್ಟು ಜೆಡಿಎಸ್ ಪಕ್ಷ ಕಂಗೆಟ್ಟಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಮಂಡ್ಯದಲ್ಲಿ ಪಕ್ಷಕ್ಕೆ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ಅವರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು. [ಬೆಂಗಳೂರು ದಕ್ಷಿಣದಿಂದ ರಕ್ಷಿತಾ ಸ್ಪರ್ಧೆ]
ಸದ್ಯ ಪಕ್ಷ ತಯಾರಿಸಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಸಿ.ಎಸ್.ಪುಟ್ಟರಾಜು, ಶಾಸಕ ಡಿ.ಸಿ.ತಮ್ಮಣ್ಣ ಅವರ ಪುತ್ರ ಡಿ.ಟಿ.ಸಂತೋಷ್ ಹೆಸರನ್ನು ಸೇರಿಸಲಾಗಿದೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ವಹಿಸಲಾಗಿದ್ದು, ಅವರ ನಿರ್ಧಾರವೇ ಅಂತಿಮ ಎಂಬ ಮಾತುಗಳು ಇವೆ. [ಮಂಡ್ಯದಿಂದ ಮಾತ್ರ ಸ್ಪರ್ಧಿಸುತ್ತೇನೆ : ರಕ್ಷಿತಾ]
ನಾನು ಸ್ಪರ್ಧಿಸುವುದಿಲ್ಲ : ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮವಹಿಸಿ ಕೆಲಸಮಾಡುತ್ತೇನೆ ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಈಗಾಗಲೇ ನಮ್ಮ ಕುಟುಂಬದಿಂದ ದೇವೇಗೌಡರು ಮಾತ್ರ ಸ್ಪರ್ಧಿಸುವುದಾಗಿ ಘೋಷಿಸಲಾಗಿದೆ ಹಾಗೆಯೇ ನಡೆದುಕೊಳ್ಳುತ್ತೇವೆ ಎಂದು ಎಚ್ಡಿಕೆ ಹೇಳಿದರು. [ಜೆಡಿಎಸ್ ಸಂಭಾವ್ಯ ಪಟ್ಟಿ]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications