Vani Vilasa Sagara : ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಆತಂಕ ಇಲ್ಲ ಎಂದು ತಜ್ಞರ ವರದಿ: ಗೋವಿಂದ ಕಾರಜೋಳ
ಬೆಂಗಳೂರು, ಸೆ.9: ವಾಣಿವಿಲಾಸ ಸಾಗರ ಜಲಾಶಯದ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಪಡುವ ಕಾರಣವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
Recommended Video
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರು ಸಮಿತಿಯು ಅಣೆಕಟ್ಟೆಗೆ ಭೇಟಿ ಕೊಟ್ಟಿದ್ದು ವಾಣಿವಿಲಾಸ ಸಾಗರ ಜಲಾಶಯದ ಅಣೆಕಟ್ಟೆಯನ್ನು ಸಮಗ್ರವಾಗಿ ಪರಿಶೀಲಿಸಿ, ಪರಿವೀಕ್ಷಿಸಿ ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲವೆಂದು ಹಾಗೂ ಅಣೆಕಟ್ಟೆಯ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲವೆಂದು ವರದಿ ನೀಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಜಲ ಆಯೋಗದ ಶಿಫಾರಸ್ಸಿನಂತೆ ವಾಣಿವಿಲಾಸ ಸಾಗರ ಅಣೆಕಟ್ಟೆಯಲ್ಲಿ ಅತಿ ಹೆಚ್ಚು ಸಂಭವನೀಯ ಪ್ರವಾಹ ಪರಿಸ್ಥಿತಿ 35,000 ಕ್ಯೂಸೆಕ್ಸ್ ಇದ್ದು, ಪ್ರಸ್ತುತ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರು ಸುಮಾರು 15 ಸಾವಿರ ಕ್ಯೂಸೆಕ್ಸ್ ಇದೆ. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿರುವುದರಿಂದ ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ ಇರುವುದರಿಂದ ಪ್ರಸ್ತುತ ನೀರಿನ ಸಂಗ್ರಹಣೆ 135 ಅಡಿ ಇರುವುದರಿಂದ ಅಣೆಕಟ್ಟೆಗೆ ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ವರದಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಆತಂಕಕ್ಕೆಕಾರಣವಿಲ್ಲ ಎಂದು ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications