ಬಿಬಿಎಂಪಿಯ ಎಲ್ಲಾ ವಾರ್ಡ್ಗೆ ನೋಡಲ್ ಅಧಿಕಾರಿ ನೇಮಕ: ಡಿ ಕೆ ಶಿವಕುಮಾರ್ ಸೂಚನೆ
ಬೆಂಗಳೂರು, ನವೆಂಬರ್27: ಬಿಬಿಎಂಪಿಯ ಎಲ್ಲಾ ವಾರ್ಡ್ ಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ವಾರ್ಡ್ ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸುತ್ತೋಲೆ ಹೊರಡಿಸಿದ್ದಾರೆ.
ಉಪ ಮುಖ್ಯ ಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ಸೂಚನೆಯ ಮೇರೆಗೆ ಎಲ್ಲಾ ವಲಯಗಳಲ್ಲಿಯೂ ಪ್ರತಿ ವಾರ್ಡ್ ಗೆ ಒಬ್ಬ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಸದರಿ ಅಧಿಕಾರಿಗಳು ತಮಗೆ ನಿಯೋಜಿಸಿರುವ ವಾರ್ಡ್ ಗಳಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರದಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಕಛೇರಿಯ ಅವಧಿಯಲ್ಲಿ ಹಾಜರಿದ್ದು, ಸಾರ್ವಜನಿಕರೊಂದಿಗೆ ಸಭೆಯನ್ನು ನಡೆಸಿ, ಅವರ ದೂರು ಸಮಸ್ಯೆಗಳನ್ನು ಆಲಿಸಿ, ಇತರೆ ವಾರ್ಡ್ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸೂಚಿಸಿದೆ.

ಪ್ರತಿ ಬುಧವಾರ ನಡೆಯುವ ಸಾರ್ವಜನಿಕ ಸಭೆ ಕುರಿತು ಸಾರ್ವಜನಿಕರಿಗೆ ಸೂಕ್ತ ಪ್ರಚಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಲು ನೋಡಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ವಾರ್ಡ್ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ನೋಡಲ್ ಅಧಿಕಾರಿಗಳು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿ ಪ್ರತಿ ಬುಧವಾರ ಸಭೆ ನಡೆಯಲಿದೆ. ಈ ಸಂಬಂಧ ವಲಯ ಆಯುಕ್ತರು ವೇಳಾಪಟ್ಟಿ ಸಿದ್ದಪಡಿಸಿಕೊಂಡು ಪ್ರತಿ ಬುಧವಾರದಂದು ತಮ್ಮ ವಲಯದ ವಾರ್ಡ್ ಗಳಿಗೆ ಭೇಟಿ ನೀಡಿ ವಾರ್ಡ್ ಮಟ್ಟದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಪಾಲಿಕೆಯ 8 ವಲಯಗಳಲ್ಲಿ ಬರುವ ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದ್ದು, ವಾರ್ಡ್ ಗೆ ನಿಯೋಜಿಸಿರುವ ನೋಡಲ್ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯನ್ನು ಪಾಲಿಕೆಯ ವೆಬ್ ಸೈಟ್ bbmp.gov.in/home ನಲ್ಲಿ ಅಪ್ಲೋಡ್ ಮಾಡಲಾಗಿದೆ.
-
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು?










Click it and Unblock the Notifications