ದಾವಣಗೆರೆ: ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಆರಂಭ
ದಾವಣಗೆರೆ, ಮೇ. 09 : ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಜೂನ್ 21 ಕ್ಕೆ ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯವಾಗಿದೆ. ಆದ್ದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು. ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಧಾನ ಪರಿಷತ್ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ನೀತಿಸಂಹಿತೆ ಜಾರಿಯಲ್ಲಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 3 ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳು ಸೇರಲಿವೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ: ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ: ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ.
ಇನ್ನು, ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications