ಕರ್ನಾಟಕದಲ್ಲಿ ಮುದ್ರಾಂಕ ಶುಲ್ಕಗಳು ಏರಿಕೆ, ಎಷ್ಟು ಹೆಚ್ಚಳ? ವಿವರ
ಬೆಂಗಳೂರು, ಫೆಬ್ರವರಿ 09: ಕರ್ನಾಟಕ ಸರ್ಕಾರ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಮುದ್ರಾಂಕ ಶುಲ್ಕಗಳನ್ನು ಏರಿಕೆ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತ ಆದೇಶ ಪ್ರಕಟವಾಗಿದ್ದು, ನೂತನ ದರಗಳು ಜಾರಿಗೆ ಬಂದಿವೆ.
ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಮುದ್ರಾಂಕ (ತಿದ್ದುಪಡಿ) ಮಸೂದೆ 2023 ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಇದಕ್ಕೆ ಈಗ ರಾಜ್ಯಪಾಲರ ಅನುಮೋದನೆಯೂ ಸಿಕ್ಕಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ 28 ವರ್ಷಗಳ ಬಳಿಕ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಮುದ್ರಾಂಕ ಶುಲ್ಕಗಳನ್ನು ಏರಿಕೆ ಮಾಡಲಾಗಿದೆ. ಶೇ 200 ರಿಂದ 500 ರೂ. ತನಕ ಶುಲ್ಕಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಜಾರಿಯಾಗಿದೆ.
ಎಷ್ಟು ಶುಲ್ಕಗಳು ಏರಿಕೆ: ದತ್ತು ಸ್ವೀಕಾರ, ಅಫಿಡೆವಿಟ್, ಡೈವೋರ್ಸ್, ಕಂಪನಿಗಳ ಷೇರು ಹಂಚಿಕೆ ಪತ್ರ, ಟ್ರಸ್ಟ್ಗಳ ಪ್ರಮಾಣ ಪತ್ರ, ಪವರ್ ಅಫ್ ಆರ್ಟಾನಿ, ಆಸ್ತಿಗಳ ಪರಭಾರೆ ಸೇರಿದಂತೆ ಒಟ್ಟು 25 ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಮುದ್ರಾಂಕ ಶುಲ್ಕಗಳನ್ನು ಏರಿಕೆ ಮಾಡಲಾಗಿದೆ.
1995ರ ಬಳಿಕ ಮೊದಲ ಬಾರಿಗೆ ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕಗಳನ್ನು ಏರಿಕೆ ಮಾಡಿದೆ. ಇತರ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಶುಲ್ಕ ಹೆಚ್ಚಿಸಲಾಗಿದೆ. ವಿವಿಧ ದಾಖಲಾತಿಗಳನ್ನು ಪಡೆಯುವವರು ಈಗ ಹೊಸ ಶುಲ್ಕವನ್ನು ಪಾವತಿಸಬೇಕು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
* ದತ್ತು ಸ್ವೀಕಾರ ಪತ್ರದ ಶುಲ್ಕ 500 ರಿಂದ 1000 ರೂ.ಗೆ ಹೆಚ್ಚಳ
* ಅಫಿಡೆವಿಟ್ 20 ರೂ. ನಿಂದ 100 ರೂ.ಗೆ ಏರಿಕೆ
* ಡೈವೋರ್ಸ್ ಪ್ರಮಾಣ ಪತ್ರ 100 ರಿಂದ 500 ರೂ.ಗೆ ಏರಿಕೆ
* ಕಂಪನಿ ಷೇರುಗಳ ಅಲಾಟ್ಮೆಂಟ್ ಶುಲ್ಕ 1 ರೂ.ನಿಂದ 10 ರೂ. ಗೆ ಏರಿಕೆ
* ಟ್ರಸ್ಟ್ (ಸಾರ್ವಜನಿಕ, ಧಾರ್ಮಿಕ, ಚಾರಿಟಬಲ್) 1000 ರೂ. ನಿಂದ 2 ಸಾವಿರಕ್ಕೆ ಏರಿಕೆ
* ಪವರ್ ಆಫ್ ಅರ್ಟಾನಿ 100 ರಿಂದ 500 ರೂ. ಗೆ ಹೆಚ್ಚಳ
* ಆಸ್ತಿ ಪರಭಾರೆ (ಸೆಕ್ಷನ್ 25 ಅನ್ವಯ) 100 ರಿಂದ 200 ರೂ.ಗಳಿಗೆ ಏರಿಕೆ
* ಪಾನ್ ಡಾಕ್ಯುಮೆಂಟ್ ಶುಲ್ಕಗಳಲ್ಲಿ ಯಾವುದೇ ಏರಿಕೆಯಾಗಿಲ್ಲ
ಹಲವು ರೀತಿಯ ಒಪ್ಪಂದಗಳನ್ನು ಮಾಡಿಕೊಳ್ಳುವಾಗ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳು ಎರಡೂ ಕಡೆಯವರಿಗೆ ಕಾನೂನಿನ ರಕ್ಷಣೆಯನ್ನು ನೀಡುತ್ತವೆ. ಆದ್ದರಿಂದ ಇವುಗಳು ಮಹತ್ವದ ದಾಖಲೆಗಳಾಗಿವೆ. ಇವುಗಳ ಮುದ್ರಾಂಕ ಶುಲ್ಕಗಳನ್ನು ಏರಿಕೆ ಮಾಡಿರಲಿಲ್ಲ. ಈಗ ಅವುಗಳನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಮುದ್ರಾಂಕ ಶುಲ್ಕಗಳ ಏರಿಕೆ ಕುರಿತು ಜನರಿಗೆ ಅರಿವು ಮೂಡಿಸಲು ಸಹ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಸಬ್ ರಿಜಿಸ್ಟಾರ್ ಕಛೇರಿಗಳಲ್ಲಿ ಈ ಕುರಿತು ಫಲಕಗಳನ್ನು ಆಳವಡಿಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಿತ್ತು. ನಂತರ ಸರ್ಕಾರ ಮುದ್ರಾಂಕ ಶುಲ್ಕಗಳನ್ನು ಪರಿಷ್ಕರಣೆ ಮಾಡಿತ್ತು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications