Pavitra Gowda: ಜೈಲಿನಲ್ಲಿ ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್ ಸಹಚರರಿಗೆ ಮಟನ್ ಊಟ: ಮೆನು ಮಾಹಿತಿ ಇಲ್ಲಿದೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ಕೇಸ್ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅವರು ಜೈಲು ಸೇರಿ ನಿನ್ನೆಗೆ ಎರಡು ದಿನ ಕಳೆದಿದೆ. ಎರಡನೇ ದಿನ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮಟನ್ ಊಟ ಸೇವಿಸಿದ್ದಾರೆ ಎಂದು ಹೇಳಲಾಗಿದೆ.
ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿರುವ ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್ನ ಸಹಚರರಿಗೆ ಬಾಡೂಟ ನೀಡಲಾಗಿದೆ. ಕಾರಾಗೃಹದ ಮೆನು ಅನುಸಾರ ಮಟನ್, ಚಪಾತಿ, ಮುದ್ದೆ ಹಾಗೂ ಅನ್ನ ನೀಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ಇಷ್ಟು ದಿನ ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಪವಿತ್ರಾ ಗೌಡ ಈಗ ಜೈಲು ವಾಸು ಅನುಭವಿಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಮೆನುವಿನಂತೆ ನಾನ್ ವೆಜ್ ಊಟ ನೀಡಲಾಗಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಪವಿತ್ರಾ ಗೌಡ ಹಾಗೂ ಇತರ ಸಹಚರರಿಗೆ ಜೈಲಿನಲ್ಲಿ ನಾನ್-ವೆಜ್ ಊಟ ಕೊಡಲಾಗಿದೆ. ಮೆನುವಿನ ಪ್ರಕಾರ ಮಟನ್, ಮುದ್ದೆ, ಚಪಾತಿ, ರೈಸ್ ನೀಡಲಾಗಿದೆ. ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್ನವರು ಬಾಡೂಟ ಸೇವಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಶುಕ್ರವಾರ ರಾತ್ರಿ 8 ಗಂಟೆಯ ಸುಮಾರಿಗೆ ಕಾರಾಗೃಹ ಸಿಬ್ಬಂದಿಯು ಊಟ ನೀಡಿದರು. ಊಟ ಮಾಡಿದ ಬಳಿಕ ಮಹಿಳಾ ವಿಭಾಗದ ಡಿ ಬ್ಯಾರಕ್ನಲ್ಲಿ ಪವಿತ್ರಾ ಗೌಡ ಮೌನಕ್ಕೆ ಜಾರಿದರು. ತಮಗೆ ಎಂಥ ಪರಿಸ್ಥಿತಿ ಎದುರಾಯ್ತು ಎಂದು ಅವರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ ಅವರು ಜೈಲಿನಲ್ಲಿ ಸರಿಯಾಗಿ ಊಟ ಹಾಗೂ ನಿದ್ರೆ ಮಾಡದೇ ಚಡಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಆಗಿದ್ದೇನು?
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನು ಅಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಎನ್ನಲಾಗಿದೆ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಪಟ್ಟಣಗೆರೆ ಶೆಡ್ನಲ್ಲಿ ಚಿತ್ರಹಿಂಸೆ ನೀಡಿ ಸಾಯಿಸಲಾಯಿತು ಎಂಬ ಆರೋಪ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರ ಮೇಲಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇತ್ತ ಈ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications