ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ : ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜುಲೈ 29 : "ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಸೋಮವಾರ ವಿಧಾನ ಪರಿಷತ್‌ನಲ್ಲಿ ಬಿ. ಎಸ್. ಯಡಿಯೂರಪ್ಪ ಧನ ವಿನಿಯೋಗ ವಿಧೇಯಕ ಮಂಡನೆ ಮಾಡಿದರು. ವಿಧೇಯಕದ ಮೇಲೆ ಮಾತನಾಡಿದ ಅವರು, "ರಾಜ್ಯದ ಅಭಿವೃದ್ಧಿಗೆ ಶ್ರಮಿಸುವೆ. ಅದರಲ್ಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ" ಎಂದರು.

ಸಂಪುಟ ಸಭೆ ನಿರ್ಣಯಗಳು: ಉ.ಕರ್ನಾಟಕ ಮತ್ತು ಸಿದ್ದರಾಮಯ್ಯಗೆ ಆದ್ಯತೆ!ಸಂಪುಟ ಸಭೆ ನಿರ್ಣಯಗಳು: ಉ.ಕರ್ನಾಟಕ ಮತ್ತು ಸಿದ್ದರಾಮಯ್ಯಗೆ ಆದ್ಯತೆ!

"ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗೆ ಲಕ್ಷ ಕೋಟಿ ರೂ. ಹಣ ನಿಗದಿ ಮಾಡಬೇಕಿದೆ. ಇದಕ್ಕಾಗಿ ನಾಲ್ಕೈದು ದಿನಗಳಲ್ಲಿ ಎಲ್ಲಾ ಪಕ್ಷಗಳ ನಿಯೋಗವನ್ನು ಪ್ರಧಾನಿ ಬಳಿಗೆ ಕರೆದೊಯ್ಯಲಾಗುವುದು" ಎಂದು ತಿಳಿಸಿದರು.

ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎಚ್.ಡಿ.ದೇವೇಗೌಡಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎಚ್.ಡಿ.ದೇವೇಗೌಡ

North Karnataka Development My Priority Says BS Yediyurappa

"ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದೆ. ಇದರಿಂದಾಗಿ ಪ್ರಧಾನಿ ಮನವೊಲಿಸಿ ಅಧಿಕ ಅನುದಾನ ತರಲು ಪ್ರಯತ್ನಿಸಲಾಗುವುದು" ಎಂದು ಯಡಿಯೂರಪ್ಪ ಪರಿಷತ್ತಿನಲ್ಲಿ ಭರವಸೆ ನೀಡಿದರು.

ಡಿಕೆಶಿ ಧಮ್ಕಿ ರಾಜಕಾರಣ ಉತ್ತರ ಕರ್ನಾಟಕದಲ್ಲಿ ನಡೆಯಲ್ಲ: ರಾಮುಲುಡಿಕೆಶಿ ಧಮ್ಕಿ ರಾಜಕಾರಣ ಉತ್ತರ ಕರ್ನಾಟಕದಲ್ಲಿ ನಡೆಯಲ್ಲ: ರಾಮುಲು

"ಕಾವೇರಿ ನದಿಯ ಜಲಾನಯನ ಯೋಜನೆಗಳಿಗೂ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ. ಮೇಕೆದಾಟು ಯೋಜನೆಗೆ ಸರ್ಕಾರದ ಬೆಂಬಲವಿದೆ. ಅದನ್ನು ಮುಂದುವರಿಸಲಾಗುತ್ತದೆ" ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ನಲ್ಲಿ ಸಭಾನಾಯಕರು ನೇಮಕವಾಗದ ಕಾರಣ ಬಿ. ಎಸ್. ಯಡಿಯೂರಪ್ಪ ಅವರೇ ಧನ ವಿನಿಯೋಗ ವಿಧೇಯಕ ಮಂಡನೆ ಮಾಡಿದರು. ವಿಧೇಯಕ ಅಂಗೀಕಾರವಾದ ಬಳಿಕ ಕಲಾಪವನ್ನು ಮುಂದೂಡಲಾಯಿತು.

English summary
In a Legislative Council Karnataka Chief Minister B.S.Yediyurappa said that north Karnataka development my priority, will give more attention to drinking water projects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X