Karnataka Railways: ಎಕ್ಸ್ಪ್ರೆಸ್ ರೈಲಿನ ನಿಲುಗಡೆಗೆ ಗ್ರೀನ್ ಸಿಗ್ನಲ್: 2 ರಸ್ತೆ ಕೆಳ ಸೇತುವೆಗಳಿಗೆ ಶಂಕುಸ್ಥಾಪನೆ
ಉತ್ತರ ಕರ್ನಾಟಕದಲ್ಲಿ ರೈಲ್ವೆ ವ್ಯಾಪ್ತಿಯಲ್ಲಿ ಸಾಕಷ್ಟು ಸುಧಾರಣೆಗಳು ಆಗುತ್ತಿವೆ. ಇದೀಗ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು. ಅವರು ಹಲವಾರು ಪ್ರಮುಖ ಕಾರ್ಯಾಚರಣೆ ಮತ್ತು ಸುರಕ್ಷತಾ ಅಂಶಗಳನ್ನು ಸೋಮವಾರ ಪರಿಶೀಲಿಸಿದರು. ಜೊತೆಗೆ SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿನ (17317) ಹೆಚ್ಚುವರಿ ನಿಲುಗಡೆಗೆ ಅವರು ಹಸಿರು ನಿಶಾನೆ. ಇದರಿಂದಾಗುವ ಪ್ರಯೋಜನಗಳು ಏನು? ಹೊಸ ಕೇಳಸೇತುವೆ ನಿರ್ಮಾಣ ಆಗುತ್ತಿರುವುದೆಲ್ಲಿ? ಇಲ್ಲಿದೆ ವಿವರ.
ಇಂದು ಸೋಮವಾರ ಸಚಿವ ವಿ.ಸೋಮಣ್ಣ ಅವರು ಧಾರವಾಡ - ಬೆಳಗಾವಿ ವಿಭಾಗದ ನಡುವೆ ಅವರು ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು. ಅವರು ಹಲವಾರು ಪ್ರಮುಖ ಕಾರ್ಯಾಚರಣೆ ಮತ್ತು ಸುರಕ್ಷತಾ ಅಂಶಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಇದೇ ವೇಳೆ ಸಾರ್ವಜನಿಕರೊಂದಿಗೆ ಸಂವಹನ ನಡೆಸಿದ ಅವರು ಅವರ ಕುಂದು ಕೊರತೆಗಳನ್ನು ಆಲಿಸಿದರು. ಅವರ ಮನವಿ, ಬೇಡಿಕೆಗಳನ್ನು ಪರಿಶೀಲಿಸಲಾಗುವುದು. ಅವುಗಳ ಕುರಿತು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆ (ABSS) ಅಡಿಯಲ್ಲಿ ಪ್ರಸ್ತುತ ಪುನರಾಭಿವೃದ್ಧಿ ಮಾಡಲಾಗುತ್ತಿರುವ ಅಳ್ನಾವರ ರೈಲು ನಿಲ್ದಾಣದ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಒಟ್ಟಾರೆ ನಿಲ್ದಾಣದ ಮೂಲ ಸೌಕರ್ಯವನ್ನು ಸುಧಾರಿಸಲು ಅಧಿಕಾರಿಗಳೊಂದಿಗೆ ಹಲವಾರು ಪ್ರಮುಖ ನಿರ್ದೇಶನಗಳನ್ನು ನೀಡಿದರು.
ಎಕ್ಸ್ಪ್ರೆಸ್ ರೈಲಿನ ಹೆಚ್ಚುವರಿ ನಿಲುಗಡೆಗೆ ಗ್ರೀನ್ ಸಿಗ್ನಲ್
ಉತ್ತರ ಕರ್ನಾಟಕದಲ್ಲಿ ಮೂಲ ಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಬೆಳಗಾವಿಯಲ್ಲಿ LC 380 ಮತ್ತು ಖಾನಾಪುರದಲ್ಲಿ LC 360 ರ ಬದಲಿಗೆ 2 ರಸ್ತೆ ಕೆಳ ಸೇತುವೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಇದರೊಂದಿಗೆ ಖಾನಾಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯ SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿಗೆ (17317) ಹಸಿರು ನಿಶಾನೆ ನೀಡಲಾಯಿತು.
ನಿಲುಗಡೆಯಿಂದ ಈ ಭಾಗಕ್ಕೆ ಸಿಗುವ ಪ್ರಯೋಜನಗಳೇನು?
SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿನ ನಿಲುಗಡೆಯಿಂದ ಬೆಳಗಾವಿ ಮತ್ತು ಖಾನಾಪುರ ರೈಲು ಮತ್ತು ರಸ್ತೆ ಸಾರಿಗೆ ಅಚರಣೆ ಇಲ್ಲದೇ ಸಂಚಾರ ನೀಡಿದಂತಾಗುತ್ತದೆ. ಈ ಭಾಗದ ಜನರಿಗೆ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಇತರ ಸೌಲಭ್ಯಗಳಿಗೆ ಉತ್ತಮ ಸಂಪರ್ಕ ಒದಗಿಸುತ್ತದೆ. ಸ್ಥಳೀಯ ರೈಲು ಸೇವೆ, ಸಂಪರ್ಕವನ್ನು ಉತ್ತೇಜಿಸುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸುತ್ತದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications