ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು: ಸಿದ್ದರಾಮಯ್ಯ ಖಡಕ್ ಉತ್ತರ
ಬೆಂಗಳೂರು, ಜುಲೈ 30: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ.
ಉತ್ತರ-ದಕ್ಷಿಣ ಎಂಬ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಈ ಕೂಗಿಗೆ ನಮ್ಮ ಬೆಂಬಲವಿಲ್ಲ ಎಂದು ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಉತ್ತರ-ದಕ್ಷಿಣದ ನಡುವಿನ ಅಂತರವನ್ನು ಸರಿದೂಗಿಸುವ ಸಲುವಾಗಿಯೇ ನಾನು ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಸ್ಪರ್ಧಿಸಿದೆ ಎಂದು ಸಹ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರನ್ನು ನಿರಂತರವಾಗಿ ನಿರ್ಲಕ್ಷ್ಯಿಸಲಾಗುತ್ತಿದೆ, ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ಆಗಸ್ಟ್ 2 ರಂದು ಗುರುವಾರ ಉತ್ತರ ಕರ್ನಾಟಕ ಬಂದ್ ಗೆ ಕರೆನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಸಾಲು ಸಾಲು ಟ್ವೀಟ್ ಇಲ್ಲಿದೆ.

ಉತ್ತರ ದಕ್ಷಿಣ ಎಂಬ ಭೇದವಿಲ್ಲ
"ಉತ್ತರ-ದಕ್ಷಿಣ ಭೇದ ನಮಗಿಲ್ಲ.ನಮ್ಮದು ಒಂದೇ ಕರ್ನಾಟಕ. ಅದು ಅಖಂಡ ಕರ್ನಾಟಕ. ಚಾರಿತ್ರಿಕ ಕಾರಣಗಳಿಗಾಗಿ ರಾಜ್ಯದ ಕೆಲವು ಭಾಗಗಳು ಹಿಂದುಳಿದಿರುವುದು ನಿಜ. ಅವುಗಳ ಅಭಿವೃದ್ದಿ ಗೆ ಒತ್ತು ನೀಡುವ ಪ್ರಾದೇಶಿಕ ನ್ಯಾಯದ ಪರವಾಗಿ ನಮ್ಮ ಪಕ್ಷ ಇದೆ"- ಸಿದ್ದರಾಮಯ್ಯ

ಅಖಂಡ ಕರ್ನಾಟಕದ ರಕ್ಷಣೆಗೆ ಬದ್ಧ
"ಜಾತಿ-ಧರ್ಮಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು ಜನದ್ರೋಹದ ಕೆಲಸ. ಅಖಂಡ ಕರ್ನಾಟಕದ ರಕ್ಷಣೆ-ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ, ನಾನು ಸದಾ ಸಿದ್ಧ"- ಸಿದ್ದರಾಮಯ್ಯ

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೇಕೆ?
"ಉತ್ತರ-ದಕ್ಷಿಣದ ನಡುವಿನ ಅಂತರವನ್ನು ಹೋಗಲಾಡಿಸಿ ಸೌಹಾರ್ದತೆಯ ಪರಂಪರೆಯನ್ನು ಗಟ್ಟಿಗೊಳಿಸಲಿಕ್ಕಾಗಿಯೇ ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆ ಕ್ಷೇತ್ರದ ಜನರ ಆಶೀರ್ವಾದ ನನ್ನ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ"- ಸಿದ್ದರಾಮಯ್ಯ

ಬಿಜೆಪಿಯ ಆತ್ಮವಂಚಕ ನಡವಳಿಕೆ
"ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನಕ್ಕೆ ತಿದ್ದುಪಡಿ (371-ಜೆ) ಮಾಡಬೇಕೆಂಬ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಪಕ್ಷ. ಆ ಬೇಡಿಕೆಯನ್ನು ತಿರಸ್ಕರಿಸಿದ್ದ ಬಿಜೆಪಿಯ ನಾಯಕರು ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿರುವುದು ಆತ್ಮದ್ರೋಹ ಮಾತ್ರವಲ್ಲ, ಆತ್ಮವಂಚಕ ನಡವಳಿಕೆ"- ಸಿದ್ದರಾಮಯ್ಯ

ನಂಜುಂಡಪ್ಪ ವರದಿಗೆ ಕಾಂಗ್ರೆಸ್ ಬದ್ಧ
"ಡಿ.ಎಂ.ನಂಜುಂಡಪ್ಪ ಸಮಿತಿಯ ಶಿಪಾರಸ್ಸಿನಂತೆ ರೂಪಿಸಲಾಗಿದ್ದ ವಿಶೇಷ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಮಾಡಲು ಅದರ ಅವಧಿಯನ್ನು ಐದು ವರ್ಷಗಳ ಕಾಲ ವಿಸ್ತರಿಸಿದ್ದು ನಮ್ಮ ಸರ್ಕಾರ. ಪ್ರತಿ ವರ್ಷ ಇದಕ್ಕಾಗಿ 1500 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನಮ್ಮ ಸರ್ಕಾರ ನೀಡಿತ್ತು"- ಸಿದ್ದರಾಮಯ್ಯ
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications