ಸಿಗದ ಸಚಿವ ಸ್ಥಾನ; ಶೆಟ್ಟರ್ ನಿವಾಸದಲ್ಲಿ ಸಭೆ ನಡೆಸಿದ ಶಾಸಕರಾರು?
ಬೆಂಗಳೂರು, ಫೆಬ್ರವರಿ 18: ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ಸರ್ಕಸ್ ಮುಗಿದು ಇನ್ನೇನು ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ ಸಚಿವ ಸ್ಥಾನ ಸಿಗದ ಉತ್ತರ ಕರ್ನಾಟದ ಬಿಜೆಪಿಯ ಕೆಲ ಪ್ರಮುಖ ಶಾಸಕರು ಯಡಿಯೂರಪ್ಪ ವಿರುದ್ಧ ಮತ್ತೆ ಬಂಡಾಯ ಎದ್ದರಾ? ಎಂಬ ಅನುಮಾನ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ.
ಸೋಮವಾರ ಸಂಜೆ ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ನಿವಾಸದಲ್ಲಿ ಸಚಿವ ಸ್ಥಾನ ಸಿಗದ ಕೆಲವು ಅತೃಪ್ತ ಶಾಸಕರು ರಾತ್ರಿ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಆದರೆ, ಜಗದೀಶ್ ಶೆಟ್ಟರ್ ಅವರು, ಈ ಸಭೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ಪ್ರತಿಕ್ರಿಯಿಸದೇ, ನೇರವಾಗಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಸಂತೋಷ್ ಅವರ ಮೇಲೆ ತೀವ್ರ ಕಿಡಿಕಾರಿದ್ದಾರೆ.

ಸಭೆಯಲ್ಲಿ ಇದ್ದ ಶಾಸಕರಾರು?
ಸೋಮವಾರ ಜಗದೀಶ್ ಶೆಟ್ಟರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಹುಕ್ಕೇರಿ ಶಾಸಕ ಉಮೇಶ ಕತ್ತಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬೀಳಗಿ ಶಾಸಕ ಮುರುಗೇಶ ನಿರಾಣಿ, ದೇವದುರ್ಗ ಶಾಸಕ ಶಿವನಗೌಡ ನಾಯಕ್, ಸುರಪುರ ಶಾಸಕ ರಾಜುಗೌಡ, ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಇದ್ದರು ಎನ್ನಲಾಗಿದೆ.

ಬಿ ವೈ ವಿಜಯೇಂದ್ರ ಮೇಲೆ ಅಸಮಾಧಾನ
ಸಭೆಯಲ್ಲಿ ಮುಖ್ಯಮಂತ್ರಿ ಪುತ್ರ ಬಿ ವೈ ವಿಜಯೇಂದ್ರ ಅವರ ಬಗ್ಗೆ ತೀವ್ರ ಅಪಸ್ವರ ಕೇಳಿ ಬಂದಿದೆ ಎಲ್ಲವೂ ವಿಜಯೇಂದ್ರ ಅವರ ನಿಗಾದಲ್ಲಿ ನಡೆಯುತ್ತಿದೆ. ಇದು ಸರಿಯಲ್ಲ. ಸಭೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತರಬೇಕು ಎಂದು ಯತ್ನಾಳ ಸೇರಿದಂತೆ ಹಲವು ಶಾಸಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿಎಸ್ವೈ ಆಪ್ತ ಸಂತೋಷ್ ಮೇಲೆ ಕಿಡಿ
ಸಭೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು, ನೇರವಾಗಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಎನ್ ಆರ್ ಸಂತೋಷ್ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಸಮಾನ ಮನಸ್ಕ ಶಾಸಕರು ಸಭೆ ಸೇರಿದ್ದೇವು. ಇದೊಂದು ಅತೃಪ್ತರ ಸಭೆ ಎಂದು ಮಾಧ್ಯಮಗಳಲ್ಲಿ ಬಿಂಬಿತವಾಗುವಂತೆ ಮಾಡಿದ್ದು ಸಂತೋಷ್ ಎಂದು ಆರೋಪಿಸಿದ್ದಾರೆ. ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

ಅಸಮಧಾನಿತ ಉತ್ತರದ ಶಾಸಕರು
ಒಟ್ಟಿನಲ್ಲಿ ಉತ್ತರ ಹಿರಿಯ ಬಿಜೆಪಿ ಶಾಸಕರೇ ಪಾಲ್ಗೊಂಡಿದ್ದ ಸೋಮವಾರ ಸಂಜೆ ನಡೆದ ಸಭೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಬಂಡಾಯಕ್ಕೆ ಕಾರಣವಾಗುತ್ತಾ ಎನ್ನುವುದನ್ನು ಕಾಯ್ದು ನೋಡಬೇಕಿದೆ. ಈ ಸಭೆಯಲ್ಲಿ ಪ್ರಸಕ್ತ ಪಕ್ಷದ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಗಿದ್ದು, ಸಚಿವ ಸ್ಥಾನ ನೀಡುವಾಗ ಪ್ರದೇಶ, ಜಾತಿ ಮತ್ತು ಹಿರಿತನಕ್ಕೆ ಮನ್ನಣೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದರೂ, ಸಚಿವ ಸ್ಥಾನ ಸಿಗದ ಉತ್ತರ ಕರ್ನಾಟಕದ ಬಿಜೆಪಿ ಹಿರಿಯರು ಒಳಗೊಳಗೆ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications