ಕಾವೇರಿ ನದಿ ಪಾಲು : ಕರ್ನಾಟಕಕ್ಕೆ ಸಿಕ್ಕ ಪಾಲು ಇನ್ನು ಹೆಚ್ಚಳ!
ಬೆಂಗಳೂರು, ಮಾರ್ಚ್ 21: ಕನ್ನಡಿಗರ ಜೀವನದಿ ಕಾವೇರಿ ಕನ್ನಡಿಗರ ಪಾಲಿಗೆ ಹೆಚ್ಚಾಗಿ ಒಲಿದಿದ್ದಾಳೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪಿನಂತೆ ಸಿಗಬೇಕಿರುವ ಪಾಲು ಈಗ ಇನ್ನಷ್ಟು ಹೆಚ್ಚಳವಾಗಿದೆ. 284.75 ಟಿಎಂಸಿ ಅಡಿ ನೀರು ಬದಲಿಗೆ 350.65 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ದಕ್ಕಲಿದೆ.
ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಫೆಬ್ರವರಿ 17ರಂದು ಬಂದಿತ್ತು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ನ್ಯಾ ದೀಪಕ್ ಮಿಶ್ರಾ ಅವರು ನೀಡಿದ ಅಂತಿಮ ತೀರ್ಪಿನ ಅನ್ವಯ ಕರ್ನಾಟಕಕ್ಕೆ 270ರ ಬದಲಿಗೆ 284 ಟಿಎಂಸಿ ಆಡಿ ನೀರು ಸಿಗಬೇಕು ಎಂಬ ತೀರ್ಪು ಬಂದಿತ್ತು.
ಜತೆಗೆ ತಮಿಳುನಾಡಿನ ಪಾಲು 177.25 ಟಿಎಂಸಿ ಅಡಿ ಎಂದು ನಿರ್ಧರಿಸಲಾಗಿತ್ತು.

ವಾರ್ಷಿಕ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಲಭ್ಯವಾಗಲಿದ್ದು, ಅಗತ್ಯಕ್ಕೆ ತಕ್ಕಂತೆ ಕರ್ನಾಟಕ ತನ್ನ ನೀರಾವರಿ ಸಂಪತ್ತನ್ನು ವಿಸ್ತರಿಸಿಕೊಳ್ಳಬಹುದು. ಹೀಗಾಗಿ ಅಣೆಕಟ್ಟು ನಿರ್ಮಾಣದ ಕರ್ನಾಟಕದ ಪ್ರಸ್ತಾವನೆಗೆ ಬಲ ಸಿಕ್ಕಿದೆ.
ಬೆಂಗಳೂರಿನ ಕುಡಿಯುವ ನೀರಿನ ದಾಹಕ್ಕೆ ಬೆಲೆ ನೀಡಿದ್ದು, ಪುನರ್ ಬಳಕೆ ಮೂಲಕ 26.9 ಟಿಎಂಸಿ ಅಡಿ ಹಾಗೂ 39 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಮೇಕೆದಾಟು ಹಾಗೂ ಶಿವಸಮುದ್ರಕ್ಕೆ ಹರಿಸಿ, ನೀರಾವರಿ ಯೋಜನೆಗಳಿಗೆ ಬಳಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಉಲ್ಲೇಖವಿಲ್ಲದಿರುವುದರಿಂದ ಜಲ ವಿದ್ಯುತ್ ಯೋಜನೆಗೆ ವಿನಿಯೋಗಿಸಿದರೆ, ಹೆಚ್ಚುವರಿ ನೀರು ಕರ್ನಾಟಕಕ್ಕೆ ಲಭ್ಯವಾಗಲಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications