ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ : ಕಾಮಗಾರಿ ಆರಂಭಿಸದಂತೆ ಸುಪ್ರೀಂ ಸೂಚನೆ

|
Google Oneindia Kannada News

ಬೆಂಗಳೂರು, ಮಾರ್ಚ್ 02 : ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಯೋಜನೆಯ ಕಾಮಗಾರಿಯನ್ನು ಆರಂಭಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

Recommended Video

Mahadayi project will not be initiated says Supreme court | Supreme court | Oneindia Kannada

ಗೋವಾ ಸರ್ಕಾರ ಮಹದಾಯಿ ಯೋಜನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು. 2014ರ ಮಧ್ಯಂತರ ತೀರ್ಪು ಪಾಲಿಸುವಂತೆ ಸೂಚನೆ ನೀಡಿದ ನ್ಯಾಯಾಲಯ ಗೋವಾ ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ

ಮಹದಾಯಿ ನ್ಯಾಯಾಧೀಕರಣ 2014ರಲ್ಲಿ ನೀಡಿದ್ದ ಆದೇಶವನ್ನು ಪಾಲಿಸಬೇಕು. ಯೋಜನೆಯ ಡಿಪಿಆರ್ ಸಲ್ಲಿಕೆ ಮಾಡಿದ ಬಳಿಕ ಕಾಮಗಾರಿ ಆರಂಭಿಸಬಹುದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನ

supreme court

ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಕೇಂದ್ರ ಸರ್ಕಾರದ ಏಜೆನ್ಸಿಗಳ ಅನುಮತಿ ಪಡೆದುಕೊಂಡು ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮಹದಾಯಿ ವಿವಾದ; ಮತ್ತೆ ಕ್ಯಾತೆ ತೆಗೆದ ಗೋವಾ ಕಾಂಗ್ರೆಸ್ ಮಹದಾಯಿ ವಿವಾದ; ಮತ್ತೆ ಕ್ಯಾತೆ ತೆಗೆದ ಗೋವಾ ಕಾಂಗ್ರೆಸ್

ಫೆಬ್ರವರಿ 20ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹದಾಯಿ ಯೋಜನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು ಎಂದು ಸೂಚನೆ ನೀಡಿತ್ತು. ಫೆಬ್ರವರಿ 27ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಸರ್ಕಾರ ಅಧಿಸೂಚನೆ ಹೊರಡಿಸಿದರೂ ಈಗ ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸುವಂತಿಲ್ಲ. ಯೋಜನೆಯ ಡಿಪಿಆರ್ ಸಿದ್ಧವಾಗಬೇಕು. ಕೇಂದ್ರದ ವಿವಿಧ ಏಜೆನ್ಸಿಗಳ ಅನುಮತಿಯನ್ನು ಪಡೆಯಬೇಕು.

English summary
Not start Mahadayi project work. Follow 2014 interim order of Mahadayi tribunel Supreme Court directed Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X