ನೋಟರಿಗಳು ವಿವಾಹ ಪ್ರಮಾಣ ಪತ್ರ ನೀಡುವಂತಿಲ್ಲ
ಬೆಂಗಳೂರು, ಜು. 15 : ನೋಟರಿಗಳು ನೀಡುವ ವಿವಾಹ ಘೋಷಣಾ ಪ್ರಮಾಣ ಪತ್ರ ಕಾನೂನಿನ ಮಾನ್ಯತೆ ಪಡೆದಿಲ್ಲ. ಇನ್ನು ಮುಂದೆ ಅವರು ಪ್ರಮಾಣ ಪತ್ರ ನೀಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ. ಸಬ್ ರಿಜಿಸ್ಟ್ರಾರ್ ಕಚೇರಿ ನೀಡುವ ಪ್ರಮಾಣ ಪತ್ರ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಸೋಮವಾರ ಪಿ.ಮನೋಜ್ ಎಂಬುವವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಮತ್ತು ರವಿ ಮಳಲೀಮಠ್ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ. ಈ ಆದೇಶದ ಅನ್ವಯ ವಿವಾಹ ಘೋಷಣಾ ಪ್ರಮಾಣ ಪತ್ರ ವಿತರಿಸುವ ಅಧಿಕಾರ ನೋಟರಿಗಳಿಗೆ ಇಲ್ಲ ಮತ್ತು ಅವರ ಪ್ರಮಾಣ ಪತ್ರಗಳಿಗೆ ಕಾನೂನಿನ ಮಾನ್ಯತೆ ಇಲ್ಲ.

ಸಬ್ ರಿಜಿಸ್ಟ್ರಾರ್ ಕಚೇರಿ ನೀಡುವ ವಿವಾಹ ಪ್ರಮಾಣ ಪತ್ರ ಮಾತ್ರ ಕಾನೂನಿನ ಮಾನ್ಯತೆ ಹೊಂದಿದೆ ಎಂದು ಆದೇಶದಲ್ಲಿ ಹೇಳಿರುವ ನ್ಯಾಯಪೀಠ, ಈ ಕುರಿತು ರಾಜ್ಯದ ಎಲ್ಲಾ ನೋಟರಿಗಳಿಗೆ ಸುತ್ತೋಲೆ ಹೊರಡಿಸುವಂತೆ ಕಾನೂನು ಇಲಾಖೆ ಕಾರ್ಯದರ್ಶಿ ಮತ್ತು ಸಿಟಿ ಸಿವಿಲ್ ಕೋರ್ಟ್ ರಿಜಿಸ್ಟ್ರಾರ್ ಗೆ ನಿರ್ದೇಶನ ನೀಡಿದೆ. [ಆನ್ ಲೈನ್ ಮೂಲಕ ಮದುವೆ ನೋಂದಣಿ ಮಾಡಬಹುದು]
ಅರ್ಜಿಯ ವಿಚಾರಣೆ ವೇಳೆ ಪಿ.ಮನೋಜ್ ಮತ್ತು ಆರ್.ಕೃತಿಕಾ ನಡುವೆ ನಡೆದಿದೆ ಎನ್ನಲಾದ ವಿವಾಹವನ್ನು ನ್ಯಾಯಾಲಯ ರದ್ದುಪಡಿಸಿದೆ. ಈ ದಂಪತಿಗಳಿಗೆ ಬೆಂಗಳೂರು ನಗರದ ನೋಟರಿಯೊಬ್ಬರು ನೀಡಿದ್ದ ವಿವಾಹ ಘೋಷಣಾ ಪ್ರಮಾಣ ಪತ್ರವನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. [ಹೈಕೋರ್ಟ್ ಹಿರಿಯ ವಕೀಲರಾಗಿ 11 ಮಂದಿ ನೇಮಕ]
ವಿವಾಹ ರದ್ದುಗೊಳಿಸಿದ ಕೋರ್ಟ್ : ಬೆಂಗಳೂರಿನ ಪಿ.ಮನೋಜ್ ಎಂಬುವವರು ನಾಪತ್ತೆಯಾಗಿರುವ ಪತ್ನಿ ಆರ್.ಕೃತಿಕಾಳನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.
2012ರ ಮೇ 9ರಂದು ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮದುವೆಯಾಗಿದ್ದೇವೆ. ಸಿಟಿ ಸಿವಿಲ್ ಕೋರ್ಟ್ ನೋಟರಿಯೊಬ್ಬರು ತಮ್ಮ ವಿವಾಹ ಘೋಷಣೆ ಮಾಡಿ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಪ್ರಮಾಣ ಪತ್ರವನ್ನೂ ಹಾಜರು ಪಡಿಸಿದ್ದರು. ಪ್ರಮಾಣ ಪತ್ರವನ್ನು ಅಸಿಂಧುಗೊಳಿಸಿರುವ ಕೋರ್ಟ್, ವಿವಾಹವನ್ನು ವಿಚಾರಣೆ ವೇಳೆ ರದ್ದುಗೊಳಿಸಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications