ಮೋದಿ ಜಪಾನ್ಗೆ ಹೋದಾಗೆಲ್ಲಾ ನೋಟ್ ಬ್ಯಾನ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಮೇ 20: ಈಗಾಗಲೇ ಘೋಷಿಸಿದಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತೇವೆ. ಹಿಂದೆಯೇ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಹೇಳಿದಂತೆ ನಡೆದುಕೊಂಡು ಭರವಸೆಗಳನ್ನು ಪೂರೈಸಿದ್ದೇವೆ. ನಾವು ಬಿಜೆಪಿಯವರಂತೆ ಮಾತು ತಪ್ಪುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ನರೇಂದ್ರ ಮೋದಿ ಅವರು ಮತ್ತೆ ನೋಟು ಬ್ಯಾನ್ ಮಾಡಿದ್ದಾರೆ, ಅವರು ಯಾವಾಗ ಯಾವಾಗ ಜಪಾನ್ಗೆ ಹೋಗುತ್ತಾರೆ ಅವಾಗೆಲ್ಲಾ ನೋಟು ಬ್ಯಾನ್ ಮಾಡಿ ಹೋಗುತ್ತಾರೆ. ಕಳೆದ ಬಾರಿ ಜಪಾನ್ಗೆ ಹೋಗಿದ್ದಾಗ ಆಗ 1,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿ ಹೋಗಿದ್ದರು. ಈಗ ಜಪಾನ್ ಹೋಗಿದ್ದಾರೆ. ಈಗಲೂ 2,000 ರೂಪಾಯಿ ನೋಟನ್ನು ಬ್ಯಾನ್ ಮಾಡಿ ಹೋಗಿದ್ದಾರೆ ಎಂದರು.

ಇದರರ್ಥ ಅವರಿಗೆ ಆಡಳಿತ ಅರ್ಥ ಗೊತ್ತಿಲ್ಲ. ಇದರಿಂದ ಜನರಿಗೆ ದೇಶಕ್ಕೆ ಯಾವ ಪರಿಣಾಮ ಬೀರುತ್ತದೆ ಎಂದು ಅವರಿಗೆ ಗೊತ್ತಾಗಲ್ಲ. ಜನರಿಗೆ ಅವರು ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿದ್ದಾರೆ. ಕಳೆದ ಬಾರಿಯ ಸರ್ಕಾರದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ ಇಲ್ಲಿ ನೆರೆದಿರುವರಲ್ಲಿ ಪ್ರೀತಿ ವಿಶ್ವಾಸ ತುಂಬಿದೆ ಎಂದು ಹೇಳಿದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ ಹೇಳಿದಂತೆ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ, ನಾವು ನುಡಿದಂತೆ ನಡೆಯುತ್ತೇವೆ, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಪಾನಿನ ಅಧ್ಯಕ್ಷರ ಅಡಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿ ಹಿರೋಷಿಮಾ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ. ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗೆ ಅವರ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ ಮತ್ತು ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications