ಖ್ಯಾತ ವೈದ್ಯ ಡಾ.ಹೆಗ್ಡೆ ಸೂಚಿಸಿದ ಸಿಂಪಲ್ ಮನೆ ಔಷಧಿ: ಕೊರೊನಾ ಮಾಯ!
ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಗುಣಮುಖರಾಗುತ್ತಿರುವ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಮತ್ತು ಮರಣದ ಪ್ರಮಾಣವೂ ಇಳಿಕೆಯಾಗುತ್ತಿರುವುದು ನಿಟ್ಟುಸಿರು ಬಿಡುವಂತಹ ವಿಚಾರ.
Recommended Video
ಮನುಕುಲವನ್ನು ಕಾಡುತ್ತಿರುವ ಈ ವೈರಸಿಗೆ ಆಯುರ್ವೇದದಲ್ಲಿ ಯಶಸ್ವಿ ಕ್ಲಿನಿಕಲ್ ಟೆಸ್ಟ್ ಪ್ರಯೋಗವಾಗಿದ್ದರೂ, ಸರಕಾರದಿಂದ ಈ ಲಸಿಕೆಗೆ ಅಧಿಕೃತ ಅನುಮತಿ ಇನ್ನಷ್ಟೇ ಸಿಗಬೇಕಷ್ಟೇ.
ಕೊರೊನಾಗೆ ಭಯ ಪಡಬೇಕಾಗಿಲ್ಲ ಎಂದು ಹಲವು ಖ್ಯಾತ ವೈದ್ಯರು ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾಗಿದೆ. ಬಿಂಬಿತವಾಗುತ್ತಿರುವಂತೆ ಇದು ಅಂತಹ ಭಯಾನಕ ವೈರಸ್ ಅಲ್ಲ ಎಂದು ಒತ್ತಿಒತ್ತಿ ಹೇಳುತ್ತಿದ್ದಾರೆ.
ಇವೆಲ್ಲದರ ನಡುವೆ, ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ, ಕೊರೊನಾ ಓಡಿಸುವುದಕ್ಕೆ ಸಿಂಪಲ್ ವಿಧಾನವನ್ನು ತಿಳಿಸಿದ್ದಾರೆ. ಮನೆಯಲ್ಲೇ ಇದನ್ನು ತಯಾರಿಸುವುದು ಹೇಗೆಂದು ಹೇಳಿದ್ದಾರೆ. ಅದು ಹೀಗಿದೆ:

ಖ್ಯಾತ ಹೃದ್ರೋಗ ತಜ್ಞ ಡಾ.ಬಿ.ಎಂ.ಹೆಗ್ಡೆ
ಉಡುಪಿ ಮೂಲದ ಡಾ.ಬಿ.ಎಂ.ಹೆಗ್ಡೆ ಖ್ಯಾತ ಹೃದ್ರೋಗ ತಜ್ಞರಲ್ಲೊಬ್ಬರು. ಲಕ್ನೋ ವಿಶ್ವವಿದ್ಯಾಲಯದಲ್ಲಿ ಎಂ.ಡಿ.ಪದವಿ ಪಡೆದ, ಹೆಗ್ಡೆಯವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ನಿಗೆ ತೆರಳಿ, ಅಲ್ಲಿರುವ ಎಲ್ಲಾ ರಾಯಲ್ ಕಾಲೇಜುಗಳ ಫೆಲೋ ಆದ ಪ್ರಪ್ರಥಮ ಕನ್ನಡಿಗ ಹಾಗೂ ಭಾರತೀಯನೆನಿಸಿಕೊಂಡರು. ಕೊರೊನಾಗೆ ಹೆಗ್ಡೆಯವರು ಸಿಂಪಲ್ ಔಷಧಿಯನ್ನು ಹೇಗೆ ಮಾಡುವುದೆಂದು ಹೇಳಿದ್ದಾರೆ.

ಶೀತ, ಜ್ವರ, ನೆಗಡಿ ಮಾತ್ರ ಇದ್ದರೆ ಆಸ್ಪತ್ರೆಗೆ ಹೋಗಬೇಡಿ
ಬರೀ ಶೀತ, ಜ್ವರ, ನೆಗಡಿ ಮಾತ್ರ ಇದ್ದರೆ ಆಸ್ಪತ್ರೆಗೆ ಹೋಗಬೇಡಿ ಎಂದು ಹೇಳಿರುವ ಡಾ.ಹೆಗ್ಡೆ, "ನಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ವೃದ್ದಿಸಿಕೊಳ್ಳುವುದಕ್ಕೆ ಆದ್ಯತೆಯನ್ನು ನೀಡಿ" ಎಂದಿದ್ದಾರೆ. ಜೊತೆಗೆ, ವಿಕ್ಸ್ ಶಾಖವನ್ನು ತೆಗೆದುಕೊಳ್ಳುವುದರಿಂದ ಶ್ವಾಸಕೋಶಕ್ಕೆ ತೊಂದರೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅರಸಿನ, ತುಳಸಿ
"ಕುದಿಯುತ್ತಿರುವ ನೀರಿಗೆ ಒಂದು ಸಣ್ಣ ಚಮಚದಷ್ಟು ಅರಸಿನ, 8-10 ಬಿಡಿಸಿದ ಬೆಳ್ಳುಳ್ಳಿಯ ಎಸಳು, 25-30 ತುಳಸಿಯ ಎಲೆಯನ್ನು ಚೆನ್ನಾಗಿ ಜಜ್ಜಿ, ಕುದಿಯುವ ನೀರಿಗೆ ಹಾಕಬೇಕು. ಸ್ವಲ್ಪಹೊತ್ತು ಕುದಿದ ನಂತರ, ಟವೆಲ್ ಅನ್ನು ತಲೆಗೆ ಹಾಕಿ, ಅದರ ಆವಿಯ ಶಾಖವನ್ನು ತೆಗೆದುಕೊಳ್ಳಬೇಕು" ಎಂದು ವೈದ್ಯ ಡಾ. ಹೆಗ್ಡೆ ಹೇಳಿದ್ದಾರೆ.

ಸ್ಯಾನಿಟೈಸರ್ ಬಳಸುವುದನ್ನು ಕಮ್ಮಿ ಮಾಡಿ
ಐದಾರು ಕರಿಮೆಣಸು ಮತ್ತು ಸ್ವಲ್ಪ ಕಲ್ಲು ಉಪ್ಪನ್ನು ಬಾಯಿಗೆ ಹಾಕಿಕೊಂಡು ಜಗಿಯುತ್ತಾ ನಿಧಾನವಾಗಿ ಅದರ ರಸವನ್ನು ಕುಡಿಯಬೇಕು. ಇದಾದ ಒಂದು ಗಂಟೆಯ ನಂತರ, ಊಟವನ್ನು ಸೇವಿಸಬೇಕು. ಇದನ್ನು, ರಾತ್ರಿ ಊಟದ ನಂತರ ಸೇವಿಸಿದರೆ, ಇನ್ನೂ ಒಳ್ಳೆಯದು. ಇನ್ನು ಸ್ಯಾನಿಟೈಸರ್ ಬಳಸುವ ಬದಲು, ಕೊಬ್ಬರಿ ಎಣ್ಣೆಗೆ ಸ್ವಲ್ಪ ಬೆಳ್ಳುಳ್ಳಿಯ ಎಸಳನ್ನು ಜಜ್ಜಿ (ಕುದಿಸಬೇಕಾಗಿಲ್ಲ), ಅದನ್ನು ಕೈಗೆ ಹಚ್ಚಿಕೊಂಡರೆ, ಇದರ ಮುಂದೆ ಯಾವ ಸ್ಯಾನಿಟೈಸರೂ ಇಲ್ಲ ಎಂದು ಡಾ. ಬಿ.ಎಂ.ಹೆಗ್ಡೆ ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications